ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ತುಳು ಭಾಷಿಕ ಸಮುದಾಯಗಳಿದ್ದು, ಸುಮಾರು 1.50 ಲಕ್ಷಕ್ಕಿಂತಲೂ ಹೆಚ್ಚು ತುಳು ಭಾಷಿಕರಿದ್ದಾರೆ. ಎಲ್ಲ ತುಳು ಸಮುದಾಯವನ್ನು ಒಂದೇ ವೇದಿಕೆಯಡಿ ತರಲು ತುಳು ಸಮ್ಮೇಳನ ನಡೆಸುವುದು ಸೂಕ್ತ ಎಂದು ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಟದ ಸ್ಥಾಪಕ ಕಾರ್ಯದರ್ಶಿ ಹರೀಶ್ ಆಳ್ವ ಮಂಗಳೂರು, ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಮಡಿಕೇರಿ ನಗರ ಅಧ್ಯಕ್ಷೆ ಸಾವಿತ್ರಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಶಬರಿ ಶೆಟ್ಟಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಮಡಿಕೇರಿ ತಾಲ್ಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಉಪಾಧ್ಯಕ್ಷ ಪಿ.ಸಿ.ಲೋಹಿತ್, ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…