ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ತುರ್ತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 9 ತಂಡಗಳು ಹಗಲಿರುಳು ಕಾರ್ಯಾಚರಣೆ ನಡೆಸಿ ಯುವತಿಯನ್ನು ಕರೆತಂದಿದ್ದಾರೆ. ಅವರನ್ನು ಸುರಕ್ಷಿತವಾಗಿ ಕೇರಳದ ಅವರ ಮನೆಗೆ ತಲುಪಿಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಚಾರಣಕ್ಕೆ ಬಂದಿದ್ದ ಅವರು ಏ.2ರಂದು ಗುರುವಾರ ಇತರ 15 ಮಂದಿ ಚಾರಣಿಗರೊಂದಿಗೆ ಮತ್ತು ನೇಚರ್ ಗೈಡ್ ಜೊತೆಯಲ್ಲಿ ಚಾರಣಕ್ಕೆ ಹೋಗಿದ್ದರು. ಆದರೆ ಮಧ್ಯಾಹ್ನ ಮೂಲ ನೆಲೆಗೆ ಎಲ್ಲ ಚಾರಣಿಗರು ಬಂದಾಗ ಇವರು ದಾರಿ ತಪ್ಪಿರುವುದು ತಿಳಿಯಿತು. ವಿಷಯ ತಿಳಿದ ಕೂಡಲೇ ಏಪ್ರಿಲ್ 2ರಿಂದಲೇ 5 ತಂಡದಿಂದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಯುವತಿ ನಾಪತ್ತೆ ಆಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಇಂದು ಹೆಚ್ಚುವರಿ ಸಿಬ್ಬಂದಿಯನ್ನು ಶೋಧ ಕಾರ್ಯಕ್ಕೆ ನಿಯೋಜಿಸಲಾಗಿತ್ತು ಎಂದು ತಿಳಿಸಿದರು.
ತಾವು ದಾವಣಗೆರೆ ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾಗ ವಿಷಯ ತಿಳಿಯಿತು. ಕೂಡಲೇ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೆ. ಯುವತಿ ಈಗ ಪತ್ತೆಯಾಗಿದ್ದು, ಅವರೊಂದಿಗೆ ಸಹ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.
ಇಂದು ಹೆಚ್ಚವರಿಯಾಗಿ 40 ಅರಣ್ಯ ಸಿಬ್ಬಂದಿ ನಿಯೋಜಿಸಲಾಗಿತ್ತು. ಒಟ್ಟು 9 ತಂಡಗಳು ಶೋಧ ಕಾರ್ಯಚಾರಣೆ ನಡೆಸಿದ್ದವು. ಇದರಲ್ಲಿ ಪೊಲೀಸ್ ಇಲಾಖೆ, ನಕ್ಸಲ್ ನಿಗ್ರಹ ದಳ, ಅರಣ್ಯ ಇಲಾಖೆ ಸೇರಿದಂತೆ ಬಹು ಸಂಸ್ಥೆಗಳು ಸಹಯೋಗ ನೀಡಿದ್ದವು. ಸ್ಥಳೀಯ ಬುಡಕಟ್ಟು ಜನರೂ ಶೋಧ ಕಾರ್ಯಾಚರಣೆಗೆ ನೆರವಾಗಿದ್ದರು ಎಲ್ಲರಿಗೂ ತಾವು ಅಭಿನಂದನೆ ಮತ್ತು ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
3 ದಿನವಾದರೂ ಏಕಾಂಗಿಯಾಗಿ ಕಾಡಿನಲ್ಲಿ ಓಡಾಡಿರುವ ಅವರು ಧೈರ್ಯವಂತೆಯಾಗಿದ್ದಾರೆ. ಸಾಹಸಿಗರಾಗಿದ್ದಾರೆ. ಕಾಡಿನಲ್ಲಿ ಮೊಬೈಲ್ ಸಂಪರ್ಕ ಸಿಗುವುದಿಲ್ಲ. ಹೀಗಾಗಿ ಅವರು ಇದ್ದ ನಿಶ್ಚಿತ ಸ್ಥಳದ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ ಶೋಧ ವಿಳಂಬವಾಗಿದೆ ಎಂದು ವಿವರಿಸಿದರು.
ಯಾರೇ ಯಾವುದೇ ರಾಜ್ಯದಿಂದ ಚಾರಣಕ್ಕೆ ಬಂದು ನಾಪತ್ತೆಯಾದರೆ, ಅವರನ್ನು ಹುಡುಕುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿರುತ್ತದೆ. ನಾವು ನಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದೇವೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…