ಕೊಡಗು: ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಮಂಗಳವಾರ (ಜುಲೈ. 9) ಬಿಡುಗಡೆ ಮಾಡಿದ್ದಾರೆ.
ಕಳೆದ ಎರಡು-ಮೂರು ದಿನಗಳಿಂದ ಬೆಂಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಮಟ್ಟದ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಈ ನಿರ್ಧಾರ ತೆಗೆದುಕೊಂಡಿದೆ.
ಇಂದು ಸಂಜೆ 4 ಕ್ರಸ್ಟ್ ಗೇಟ್ಗಳನ್ನು ತೆಗೆದು ಹಾರಂಗಿ ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಜಲಾಶಯ ತುಂಬಲು ಇನ್ನು ಕೇವಲ 10 ಅಡಿಗಳ ಅವಶ್ಯಕತೆಯಿದೆ. ಈಗಾಗಲೇ ಜಿಲ್ಲೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು, ನದಿ ತಟದ ಜನರೆಲ್ಲಾ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಮಳೆ ತೀವ್ರತೆ ಪಡೆದುಕೊಂಡ ಹಿನ್ನೆಲೆ ಹಾರಂಗಿ ಜಲಾಶಯ ಭರ್ತಿಯಾಗುವ ಮುನ್ನವೇ ನೀರನ್ನು ಹೊರಬಿಡಲಾಗಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ ಕೊಡಗು ಜಿಲ್ಲೆಯಾದ್ಯಂತ ವಾಡಿಕೆಗಿಂತ ಅಧಿಕ ಮಳೆ ಬರುವ ಮುನ್ಸೂಚನೆ ನೀಡಲಾಗಿದ್ದು, ಎನ್ಡಿಆರ್ಎಫ್ ತಂಡ ಹಾಗೂ ಜಿಲ್ಲಾಡಳಿತ ಪ್ರವಾಹ ತಡೆಗಟ್ಟಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ:
ಗರಿಷ್ಠ ಮಟ್ಟ: 2,848.76 ಅಡಿ
ಇಂದಿನ ಮಟ್ಟ: 2,849.30 ಅಡಿ
ನಿನ್ನೆ ಮಟ್ಟ: 2,848.76 ಅಡಿ
ಒಳ ಹರಿವು: 2,121 ಕ್ಯೂಸೆಕ್
ಹೊರ ಹರಿವು: 700 ಕ್ಯೂಸೆಕ್
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…