ಕೊಡಗು

ಬಿಜೆಪಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಒಟ್ಟು 13 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ ಹಾಗೂ ಇಟಿಯೋಸ್ ಕಾರುಗಳು ಹಾಗೂ 65,960ರೂ.ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧನಕ್ಕೊಳಗಾದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಯಣ್ಣ (38 ವರ್ಷ) ಪುಟ್ಟರಾಜು (39), ನಾಗರಾಜ.ಸಿ, (43), ವೆಂಕಟೇಶ್ ಆರ್. (44) ರಾಮು (43), ಉಮೇಶ ಕೆ, (36) ಜಯಣ್ಣ (53), ಬೋಜಪ್ಪ (50), ಮೆಹಬೂಬ್ ಸುಭಾನ್(48), ಗಿರೀಶ ಡಿ, (31) ಬಾಲು (35), ಬೆಂಗಳೂರು ಹೆಬ್ಬಗೋಡಿಯ ಹರೀಶ (35), ರಂಗಣ್ಣ (50) ಎಂದು ಗುರುತಿಸಲಾಗಿದೆ.
ಮಾ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಅವರು ಕೊಡಗಿಗೆ ಭೇಟಿ ನೀಡಿದ ಸಂದರ್ಭ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಇಂದಿರಾ ಬಡವಾಣೆ ನಿವಾಸಿ ಎಂ.ಎಂ ಚರಣ್ ಜೇಬಿನಲ್ಲಿದ್ದ 32 ಸಾವಿರ, ಅವರ ಸ್ನೇಹಿತರಾದ ಡಿ.ಹೆಚ್. ಚಂದ್ರಶೇಖರ್ ಅವರ ಜೇಬಿನಿಂದ 50 ಸಾವಿರ ಹಾಗೂ ಹೆಚ್. ಮಣಿ ಅವರ ಜೇಬಿನಿಂದ 15 ಸಾವಿರ‌ ಮತ್ತು ಅದೇ ದಿನ ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಹಾಲ್‌ನಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಂಗಸಮುದ್ರ ನಿವಾಸಿ ನಿತಿನ್ ಹೆಚ್.ಎಸ್ ಅವರ ಜೇಬಿನಿಂದ 50ಸಾವಿರ, ವೀರಾಜಪೇಟೆ ನಿವಾಸಿ ಯೋಗೇಶ್ ಅವರ ಜೇಬಿನಿಂದ 32,300 ರೂ. ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರ ಜೇಬಿನಿಂದ 17‌ಸಾವಿರ ರೂ. ಕಳವಾಗಿತ್ತು.
ಈ ಸಂಬಂಧ ದಾಖಲಾಗಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 1,96,300 ರೂ.ನಗದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ‌ ಬಿ.ಜಿ.ಪ್ರಕಾಶ್, ಕುಶಾಲನಗರ ನಗರ ಠಾಣೆ ಪಿಎಸ್ಐ ಉಮಾ.ಬಿ.ಎಸ್, ಪಿಎಸ್‌ಐ ಹಾಗೂ ಉಪವಿಭಾಗ ಮಟ್ಟದ ಅಪರಾಧ ತನಿಖಾ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಏ.2ರಂದು ಒಟ್ಟು 13 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲುಕ್ಕೆ ಹಾಜರುಪಡಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುವ ಅವರು, ವಿವಿಧ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸುವ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಸೇರುವ ಜನರ ಮಧ್ಯೆ ಸೇರಿಕೊಂಡು ನಗದು, ಮೊಬೈಲ್, ಚಿನ್ನಾಭರಣಗಳನ್ನು ಕಳ್ಳತನ ಮಾಡುವ ಸಾಧ್ಯತೆಗಳಿರುವುದರಿಂದ ಅಪಾರ ಜನಸಂದಣಿಯಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ. ಅಲ್ಲದೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.
110:20
andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

9 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

9 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

9 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

10 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

10 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

10 hours ago