ಕೊಡಗು

ಬಿಜೆಪಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಒಟ್ಟು 13 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ ಹಾಗೂ ಇಟಿಯೋಸ್ ಕಾರುಗಳು ಹಾಗೂ 65,960ರೂ.ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧನಕ್ಕೊಳಗಾದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಯಣ್ಣ (38 ವರ್ಷ) ಪುಟ್ಟರಾಜು (39), ನಾಗರಾಜ.ಸಿ, (43), ವೆಂಕಟೇಶ್ ಆರ್. (44) ರಾಮು (43), ಉಮೇಶ ಕೆ, (36) ಜಯಣ್ಣ (53), ಬೋಜಪ್ಪ (50), ಮೆಹಬೂಬ್ ಸುಭಾನ್(48), ಗಿರೀಶ ಡಿ, (31) ಬಾಲು (35), ಬೆಂಗಳೂರು ಹೆಬ್ಬಗೋಡಿಯ ಹರೀಶ (35), ರಂಗಣ್ಣ (50) ಎಂದು ಗುರುತಿಸಲಾಗಿದೆ.
ಮಾ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಅವರು ಕೊಡಗಿಗೆ ಭೇಟಿ ನೀಡಿದ ಸಂದರ್ಭ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಇಂದಿರಾ ಬಡವಾಣೆ ನಿವಾಸಿ ಎಂ.ಎಂ ಚರಣ್ ಜೇಬಿನಲ್ಲಿದ್ದ 32 ಸಾವಿರ, ಅವರ ಸ್ನೇಹಿತರಾದ ಡಿ.ಹೆಚ್. ಚಂದ್ರಶೇಖರ್ ಅವರ ಜೇಬಿನಿಂದ 50 ಸಾವಿರ ಹಾಗೂ ಹೆಚ್. ಮಣಿ ಅವರ ಜೇಬಿನಿಂದ 15 ಸಾವಿರ‌ ಮತ್ತು ಅದೇ ದಿನ ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಹಾಲ್‌ನಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಂಗಸಮುದ್ರ ನಿವಾಸಿ ನಿತಿನ್ ಹೆಚ್.ಎಸ್ ಅವರ ಜೇಬಿನಿಂದ 50ಸಾವಿರ, ವೀರಾಜಪೇಟೆ ನಿವಾಸಿ ಯೋಗೇಶ್ ಅವರ ಜೇಬಿನಿಂದ 32,300 ರೂ. ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರ ಜೇಬಿನಿಂದ 17‌ಸಾವಿರ ರೂ. ಕಳವಾಗಿತ್ತು.
ಈ ಸಂಬಂಧ ದಾಖಲಾಗಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 1,96,300 ರೂ.ನಗದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ‌ ಬಿ.ಜಿ.ಪ್ರಕಾಶ್, ಕುಶಾಲನಗರ ನಗರ ಠಾಣೆ ಪಿಎಸ್ಐ ಉಮಾ.ಬಿ.ಎಸ್, ಪಿಎಸ್‌ಐ ಹಾಗೂ ಉಪವಿಭಾಗ ಮಟ್ಟದ ಅಪರಾಧ ತನಿಖಾ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಏ.2ರಂದು ಒಟ್ಟು 13 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲುಕ್ಕೆ ಹಾಜರುಪಡಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುವ ಅವರು, ವಿವಿಧ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸುವ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಸೇರುವ ಜನರ ಮಧ್ಯೆ ಸೇರಿಕೊಂಡು ನಗದು, ಮೊಬೈಲ್, ಚಿನ್ನಾಭರಣಗಳನ್ನು ಕಳ್ಳತನ ಮಾಡುವ ಸಾಧ್ಯತೆಗಳಿರುವುದರಿಂದ ಅಪಾರ ಜನಸಂದಣಿಯಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ. ಅಲ್ಲದೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.
110:20
andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

1 hour ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

14 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

14 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago