ಕೊಡಗು

ಬಿಜೆಪಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಒಟ್ಟು 13 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ ಹಾಗೂ ಇಟಿಯೋಸ್ ಕಾರುಗಳು ಹಾಗೂ 65,960ರೂ.ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧನಕ್ಕೊಳಗಾದ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಯಣ್ಣ (38 ವರ್ಷ) ಪುಟ್ಟರಾಜು (39), ನಾಗರಾಜ.ಸಿ, (43), ವೆಂಕಟೇಶ್ ಆರ್. (44) ರಾಮು (43), ಉಮೇಶ ಕೆ, (36) ಜಯಣ್ಣ (53), ಬೋಜಪ್ಪ (50), ಮೆಹಬೂಬ್ ಸುಭಾನ್(48), ಗಿರೀಶ ಡಿ, (31) ಬಾಲು (35), ಬೆಂಗಳೂರು ಹೆಬ್ಬಗೋಡಿಯ ಹರೀಶ (35), ರಂಗಣ್ಣ (50) ಎಂದು ಗುರುತಿಸಲಾಗಿದೆ.
ಮಾ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಅವರು ಕೊಡಗಿಗೆ ಭೇಟಿ ನೀಡಿದ ಸಂದರ್ಭ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರ ಇಂದಿರಾ ಬಡವಾಣೆ ನಿವಾಸಿ ಎಂ.ಎಂ ಚರಣ್ ಜೇಬಿನಲ್ಲಿದ್ದ 32 ಸಾವಿರ, ಅವರ ಸ್ನೇಹಿತರಾದ ಡಿ.ಹೆಚ್. ಚಂದ್ರಶೇಖರ್ ಅವರ ಜೇಬಿನಿಂದ 50 ಸಾವಿರ ಹಾಗೂ ಹೆಚ್. ಮಣಿ ಅವರ ಜೇಬಿನಿಂದ 15 ಸಾವಿರ‌ ಮತ್ತು ಅದೇ ದಿನ ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಹಾಲ್‌ನಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಂಗಸಮುದ್ರ ನಿವಾಸಿ ನಿತಿನ್ ಹೆಚ್.ಎಸ್ ಅವರ ಜೇಬಿನಿಂದ 50ಸಾವಿರ, ವೀರಾಜಪೇಟೆ ನಿವಾಸಿ ಯೋಗೇಶ್ ಅವರ ಜೇಬಿನಿಂದ 32,300 ರೂ. ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರ ಜೇಬಿನಿಂದ 17‌ಸಾವಿರ ರೂ. ಕಳವಾಗಿತ್ತು.
ಈ ಸಂಬಂಧ ದಾಖಲಾಗಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 1,96,300 ರೂ.ನಗದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಲು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ‌ ಬಿ.ಜಿ.ಪ್ರಕಾಶ್, ಕುಶಾಲನಗರ ನಗರ ಠಾಣೆ ಪಿಎಸ್ಐ ಉಮಾ.ಬಿ.ಎಸ್, ಪಿಎಸ್‌ಐ ಹಾಗೂ ಉಪವಿಭಾಗ ಮಟ್ಟದ ಅಪರಾಧ ತನಿಖಾ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಏ.2ರಂದು ಒಟ್ಟು 13 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲುಕ್ಕೆ ಹಾಜರುಪಡಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿರುವ ಅವರು, ವಿವಿಧ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸುವ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಸೇರುವ ಜನರ ಮಧ್ಯೆ ಸೇರಿಕೊಂಡು ನಗದು, ಮೊಬೈಲ್, ಚಿನ್ನಾಭರಣಗಳನ್ನು ಕಳ್ಳತನ ಮಾಡುವ ಸಾಧ್ಯತೆಗಳಿರುವುದರಿಂದ ಅಪಾರ ಜನಸಂದಣಿಯಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ. ಅಲ್ಲದೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.
110:20
andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago