court
ವಿರಾಜಪೇಟೆ : ಕ್ಷುಲ್ಲಕ ಕಾರಣಕ್ಕೆ ವಾಹನ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಅಪರಾಧಿಗಳಿಗೆ ಪಟ್ಟಣದ 2ನೇ ಅಪಾರ ಜಿ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಚಿಕ್ಕಪೇಟೆ ನಿವಾಸಿಗಳಾದ ಮಾಳೇಟಿರ ಸುರೇಶ್(೫೬), ಪಟ್ಟಡ ಕಾರ್ಯಪ್ಪ (೫೭) ಶಿಕ್ಷೆಗೆ ಗುರಿಯಾದವರು.
೨೦೧೬ರ ಮೇ ೨೦ರಂದು ಮನೆಗೆ ತೆರಳುತ್ತಿದ್ದ ಎನ್.ಡಿ.ಅನಿಲ್ ಕುಮಾರ್, ಶುಂಠಿ ವ್ಯಾಪಾರಿ ಎಂ.ಬಿ.ರಾಜೇಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕತ್ತಿ ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿದ್ದರು. ಪರಿಣಾಮ ಅನಿಲ್ ಕುಮಾರ್ ಮತ್ತು ರಾಜೇಶ ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಳುಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎರಡು ವರ್ಷಗಳು ಜೈಲು ಶಿಕ್ಷೆ ಮತ್ತು ೧೪ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತರ ಪರವಾಗಿ ಸರ್ಕಾರಿ ಅಭಿಯೋಜಕ ಯಾಸಿನ್ ಅಹಮ್ಮದ್ ವಾದ ಮಂಡಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…