ಕೊಡಗು

ಕೊಡಗಿನಲ್ಲಿ 2,454 ಕಂಬಗಳಿಗೆ ಹಾನಿ: ದುರಸ್ತಿ ಕಾರ್ಯಗಳಿಗೆ 502 ಸಿಬ್ಬಂದಿ ನಿಯೋಜನೆ

ಕೊಡಗು: ಜಿಲ್ಲೆಯಾದ್ಯಂತ ಕಳೆದ ಹತ್ತು ದಿನಗಳಿಂದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ವಿದ್ಯುತ್ ಜಾಲಕ್ಕೆ ಹಾನಿಯಾಗುತ್ತಿದ್ದು, ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಇದರ ಮಧ್ಯೆಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಗುರುವಾರ (ಆ.1) ಸಾರ್ವಜನಿಕರಲ್ಲಿ ಸೆಸ್ಕ್ ಮನವಿ ಮಾಡಿದೆ.

ಮಳೆ, ಗಾಳಿಗೆ ಹಾನಿಗೊಳಗಾಗಿರುವ ವಿದ್ಯುತ್ ಜಾಲದ ಪುನಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, 500ಕ್ಕೂ ಹೆಚ್ಚು ಸಿಬ್ಬಂದಿ ಹಗಲಿರುಳು ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿದ್ಯುತ್ ಪುನಸ್ಥಾಪನೆ ಕಾರ್ಯವನ್ನು ಚುರುಕುಗೊಳಿಸಲಾಗಿದ್ದು, ಇದರ ಮಧ್ಯೆಯೂ ವಿದ್ಯುತ್ ಕಂಬ ಮತ್ತು ತಂತಿಗಳು ಹಾನಿಗೊಳಲಾಗುತ್ತಿವೆ. ಮಳೆ-ಗಾಳಿ ಮಧ್ಯೆಯೂ ಸಮಸ್ಯೆ ಬಗೆಹರಿಸಲು ಸೆಸ್ಕ್ ಸಿಬ್ಬಂದಿ ಕರ್ತವ್ಯದಲ್ಲಿ ತೊಡಗಿದ್ದಾರೆ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಮಳೆ ಹಾಗೂ ಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2,454 ಕಂಬಗಳು, 46 ವಿದ್ಯುತ್ ಪರಿವರ್ತಕಗಳು ಮತ್ತು 1.72 ಕಿಲೋ ಮೀಟರ್ ತಂತಿಗಳಿಗೆ ಹಾನಿಯಾಗಿದೆ. ಈಗಾಗಲೇ 2,150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಮರುಸ್ಥಾಪನೆ ಮಾಡಲಾಗಿದೆ. ದಿನ ನಿತ್ಯ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಆದರೆ, ಮಳೆ ಹಾಗೂ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಪ್ರತಿದಿನ 80-100 ಕಂಬಗಳ ಮುರಿಯುತ್ತಿರುವ ಬಗ್ಗೆ ವರದಿಯಾಗುತ್ತಿದೆ.

502 ಸಿಬ್ಬಂದಿ ನಿಯೋಜನೆ: ಮಳೆ ಹಾಗೂ ಗಾಳಿಯಿಂದ ಉಂಟಾಗಿರುವ ಹಾನಿ ಸರಿಪಡಿಸುವ ನಿಟ್ಟಿನಲ್ಲಿ 502 ಸಿಬ್ಬಂದಿಯನ್ನು ನಿಯೋಜಿಸಿ ಕಾಮಗಾರಿ ಮುಂದುವರಿಸಲಾಗಿದೆ. ವಿದ್ಯುತ್ ಜಾಲದ ದುರಸ್ಥಿ ಕಾರ್ಯವನ್ನು ಚುರುಕುಗೊಳಿಸಲು ಹಾಗೂ ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಮಡಿಕೇರಿ ವಿಭಾಗದ 231 ಸಿಬ್ಬಂದಿ, ಇತರೆ ವಿಭಾಗಗಳಿಂದ, ಹೊರಗುತ್ತಿಗೆಯಿಂದ 136 ಸಿಬ್ಬಂದಿ ಹಾಗೂ 135 ವಿದ್ಯುತ್ ಗುತ್ತಿಗೆದಾರರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ಸಿಬ್ಬಂದಿ ಸಾರ್ವಜನಿಕರಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಗಮನ ವಹಿಸುವ ಸಲುವಾಗಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇವರೊಂದಿಗೆ ಜಿಲ್ಲಾಯಾದ್ಯಂತ ಮಳೆ ಹಾಗೂ ಗಾಳಿಯಿಂದ ಶಾಖಾಧಿಕಾರಿಗಳು ವಿದ್ಯುತ್ ಜಾಲದ ಮರುಸ್ಥಾಪನೆ ಕಾರ್ಯ ಮತ್ತು ಬ್ರೇಕ್ ಡೌನ್ ನಿರ್ವಹಣೆ ಕಾರ್ಯದಲ್ಲಿ ನಿರತರಾಗಿರುವುದರಿಂದ ಕೆಲವೊಂದು ಸಂದರ್ಭಗಳಲ್ಲಿ ಗ್ರಾಹಕರ ದೂರವಾಣಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಗ್ರಾಹಕರ ದೂರಗಳನ್ನು ದಾಖಲಿಸಿ, ನಿವಾರಿಸುವ ನಿಟ್ಟಿನಲ್ಲಿ ಮಡಿಕೇರಿ ವಿಭಾಗಕ್ಕೆ ಪ್ರತ್ಯೇಕವಾಗಿ ನೀಡಲಾಗಿರುವ ಟೋಲ್‌ ಫ್ರೀ ಸಂಖ್ಯೆ 9141038902 ಅನ್ನು ಸಂಪರ್ಕಿಸುವಂತೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

55 mins ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

1 hour ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

2 hours ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

3 hours ago