ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಸಾಕುನಾಯಿ ದಾಳಿ ಮಾಡಿರುವ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣ ದಾಖಲು : ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಬುಧವಾರ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ಎಂಬವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲಿಕ ಬಿ.ಮಾಚಯ್ಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…