ಕೊಡಗು

ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!

ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿ.ತಂಗಪ್ಪನ್ ಎಂಬವರ ಪುತ್ರ ಪಿ.ಟಿ.ಅಪ್ಪುಕುಟ್ಟಿ(70) ಆರೋಪಿ.

ಗೊಣಿಕೊಪ್ಪ ಮೈಸೂರಮ್ಮ ಕಾಲೋನಿಯಲ್ಲಿ ಮೂವರು ಹೆಣ್ಣು ಮಕ್ಕಳೊಂದಿಗೆ ದಂಪತಿ ವಾಸವಾಗಿದ್ದರು. ಪತಿ ಆಕಾಲಿಕ ಮರಣಕ್ಕೆ ತುತ್ತಾದ ಬಳಿಕ ತಾಯಿ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಹಿರಿಯ ಮಗಳು ವಸತಿ ಶಾಲೆಯಲ್ಲಿ ಹಾಗೂ ಇಬ್ಬರು ಗೋಣಿಕೊಪ್ಪಲಿನ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. 2022 ರ ನ.16ರಂದು ಆರೋಪಿ ಅಪ್ಪುಕುಟ್ಟಿ ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ 8 ವರ್ಷದ ಬಾಲಕಿಯನ್ನು ತನ್ನ ಅಂಗಡಿಗೆ ಕರೆಯಿಸಿಕೊಂಡು ಸಿಹಿ ತಿನಿಸು ನೀಡಿ ಪುಸಲಾಯಿಸಿದ್ದ. ನಂತರ ಸಮೀಪದ ಮನೆಯಲ್ಲಿ ಟಿವಿ ತೋರಿಸುವ ಆಸೆ ತೋರಿಸಿ ಕರೆದೊಯ್ದು ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಇದನ್ನೂ ಓದಿ:-ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!

ಈ ವಿಚಾರವನ್ನು ಬಾಲಕಿ ತಾಯಿಯ ಬಳಿ ಹೇಳಿಕೊಂಡ ಮೇರೆಗೆ ತಾಯಿ ಗೋಣಿಕೊಪ್ಪಲು ಠಾಣೆಯಲ್ಲಿ ಆರೋಪಿಯ ಮೇಲೆ ಪ್ರಕರಣ ದಾಖಲಿಸಿದ್ದರು. ವಿರಾಜಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧಿಕ್ಷಕ ಎಸ್.ನಿರಂಜನ್ ರಾಜೇ ಅರಸ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಸಿದ್ದ ಪ್ರಕರಣವನ್ನು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾ.ಎಸ್.ನಟರಾಜು ಅವರು ಆರೋಪಿಯ ಮೇಲೆ ದಾಖಲಾದ ಪ್ರಕರಣಗಳು ಸಾಭಿತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಾದಾ ಜೈಲುವಾಸ ಅನುಭವಿಸುವಂತೆ ತೀರ್ಪು ನೀಡಲಾಗಿದೆ. ಸಂತ್ರಸ್ತೆ ಬಾಲಕಿಗೆ 7 ಲಕ್ಷ ರೂ.ಗಳನ್ನು ಸರ್ಕಾರದಿಂದ ಪರಿಹಾರ ರೂಪದಲ್ಲಿ ಕೊಡುವಂತೆ ಅದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಯಾಸೀನ್ ಅಹಮದ್ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

22 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago