ಕೊಡಗು

ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!

ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿ.ತಂಗಪ್ಪನ್ ಎಂಬವರ ಪುತ್ರ ಪಿ.ಟಿ.ಅಪ್ಪುಕುಟ್ಟಿ(70) ಆರೋಪಿ.

ಗೊಣಿಕೊಪ್ಪ ಮೈಸೂರಮ್ಮ ಕಾಲೋನಿಯಲ್ಲಿ ಮೂವರು ಹೆಣ್ಣು ಮಕ್ಕಳೊಂದಿಗೆ ದಂಪತಿ ವಾಸವಾಗಿದ್ದರು. ಪತಿ ಆಕಾಲಿಕ ಮರಣಕ್ಕೆ ತುತ್ತಾದ ಬಳಿಕ ತಾಯಿ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಹಿರಿಯ ಮಗಳು ವಸತಿ ಶಾಲೆಯಲ್ಲಿ ಹಾಗೂ ಇಬ್ಬರು ಗೋಣಿಕೊಪ್ಪಲಿನ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. 2022 ರ ನ.16ರಂದು ಆರೋಪಿ ಅಪ್ಪುಕುಟ್ಟಿ ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ 8 ವರ್ಷದ ಬಾಲಕಿಯನ್ನು ತನ್ನ ಅಂಗಡಿಗೆ ಕರೆಯಿಸಿಕೊಂಡು ಸಿಹಿ ತಿನಿಸು ನೀಡಿ ಪುಸಲಾಯಿಸಿದ್ದ. ನಂತರ ಸಮೀಪದ ಮನೆಯಲ್ಲಿ ಟಿವಿ ತೋರಿಸುವ ಆಸೆ ತೋರಿಸಿ ಕರೆದೊಯ್ದು ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಇದನ್ನೂ ಓದಿ:-ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!

ಈ ವಿಚಾರವನ್ನು ಬಾಲಕಿ ತಾಯಿಯ ಬಳಿ ಹೇಳಿಕೊಂಡ ಮೇರೆಗೆ ತಾಯಿ ಗೋಣಿಕೊಪ್ಪಲು ಠಾಣೆಯಲ್ಲಿ ಆರೋಪಿಯ ಮೇಲೆ ಪ್ರಕರಣ ದಾಖಲಿಸಿದ್ದರು. ವಿರಾಜಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧಿಕ್ಷಕ ಎಸ್.ನಿರಂಜನ್ ರಾಜೇ ಅರಸ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಸಿದ್ದ ಪ್ರಕರಣವನ್ನು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾ.ಎಸ್.ನಟರಾಜು ಅವರು ಆರೋಪಿಯ ಮೇಲೆ ದಾಖಲಾದ ಪ್ರಕರಣಗಳು ಸಾಭಿತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಾದಾ ಜೈಲುವಾಸ ಅನುಭವಿಸುವಂತೆ ತೀರ್ಪು ನೀಡಲಾಗಿದೆ. ಸಂತ್ರಸ್ತೆ ಬಾಲಕಿಗೆ 7 ಲಕ್ಷ ರೂ.ಗಳನ್ನು ಸರ್ಕಾರದಿಂದ ಪರಿಹಾರ ರೂಪದಲ್ಲಿ ಕೊಡುವಂತೆ ಅದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಯಾಸೀನ್ ಅಹಮದ್ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago