thieves arrested
ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಗೋಣಿಕೊಪ್ಪ ಮೈಸೂರಮ್ಮ ಕಾಲೋನಿ ನಿವಾಸಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿ.ತಂಗಪ್ಪನ್ ಎಂಬವರ ಪುತ್ರ ಪಿ.ಟಿ.ಅಪ್ಪುಕುಟ್ಟಿ(70) ಆರೋಪಿ.
ಗೊಣಿಕೊಪ್ಪ ಮೈಸೂರಮ್ಮ ಕಾಲೋನಿಯಲ್ಲಿ ಮೂವರು ಹೆಣ್ಣು ಮಕ್ಕಳೊಂದಿಗೆ ದಂಪತಿ ವಾಸವಾಗಿದ್ದರು. ಪತಿ ಆಕಾಲಿಕ ಮರಣಕ್ಕೆ ತುತ್ತಾದ ಬಳಿಕ ತಾಯಿ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಹಿರಿಯ ಮಗಳು ವಸತಿ ಶಾಲೆಯಲ್ಲಿ ಹಾಗೂ ಇಬ್ಬರು ಗೋಣಿಕೊಪ್ಪಲಿನ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. 2022 ರ ನ.16ರಂದು ಆರೋಪಿ ಅಪ್ಪುಕುಟ್ಟಿ ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ 8 ವರ್ಷದ ಬಾಲಕಿಯನ್ನು ತನ್ನ ಅಂಗಡಿಗೆ ಕರೆಯಿಸಿಕೊಂಡು ಸಿಹಿ ತಿನಿಸು ನೀಡಿ ಪುಸಲಾಯಿಸಿದ್ದ. ನಂತರ ಸಮೀಪದ ಮನೆಯಲ್ಲಿ ಟಿವಿ ತೋರಿಸುವ ಆಸೆ ತೋರಿಸಿ ಕರೆದೊಯ್ದು ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.
ಇದನ್ನೂ ಓದಿ:-ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!
ಈ ವಿಚಾರವನ್ನು ಬಾಲಕಿ ತಾಯಿಯ ಬಳಿ ಹೇಳಿಕೊಂಡ ಮೇರೆಗೆ ತಾಯಿ ಗೋಣಿಕೊಪ್ಪಲು ಠಾಣೆಯಲ್ಲಿ ಆರೋಪಿಯ ಮೇಲೆ ಪ್ರಕರಣ ದಾಖಲಿಸಿದ್ದರು. ವಿರಾಜಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧಿಕ್ಷಕ ಎಸ್.ನಿರಂಜನ್ ರಾಜೇ ಅರಸ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಸಿದ್ದ ಪ್ರಕರಣವನ್ನು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾ.ಎಸ್.ನಟರಾಜು ಅವರು ಆರೋಪಿಯ ಮೇಲೆ ದಾಖಲಾದ ಪ್ರಕರಣಗಳು ಸಾಭಿತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ತಪ್ಪಿದಲ್ಲಿ 6 ತಿಂಗಳ ಸಾದಾ ಜೈಲುವಾಸ ಅನುಭವಿಸುವಂತೆ ತೀರ್ಪು ನೀಡಲಾಗಿದೆ. ಸಂತ್ರಸ್ತೆ ಬಾಲಕಿಗೆ 7 ಲಕ್ಷ ರೂ.ಗಳನ್ನು ಸರ್ಕಾರದಿಂದ ಪರಿಹಾರ ರೂಪದಲ್ಲಿ ಕೊಡುವಂತೆ ಅದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಯಾಸೀನ್ ಅಹಮದ್ ವಾದ ಮಂಡಿಸಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…