ಕೊಡಗು

ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾತ್​​ನಿಂದ ದಿಟ್ಟ ಹೆಜ್ಜೆ : ಮಾದಕ ವ್ಯಾಸನಿಗಳಿಗಿಲ್ಲ ಜಮಾತ್ ಪ್ರವೇಶ

ಮಡಿಕೇರಿ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಬೆಳೆಯುತ್ತಾ ಹೋಗುತ್ತಿದೆ. ಯುವಕರು ಹೆಚ್ಚಾಗಿ ಮಾದಕ ದ್ರವ್ಯಗಳ ದಾಸರಾಗುತ್ತಿದ್ದಾರೆ. ಹೀಗಾಗಿ ತಮ್ಮ ಸಮುದಾಯದ ಯುವಕರು ಮಾದಕ ದ್ರವ್ಯದ ದಾಸರಾಗಬಾರದೆಂದು, ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ ಜಮಾತ್ ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ದ್ರವ್ಯ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಸಂಕ್ಷಿಪ್ತ, ಕಟ್ಟುನಿಟ್ಟಾದ ಸೂಚನೆಯನ್ನು ಕೊಂಡಂಗೇರಿ ಮಸೀದಿಯ ಹೊರಗೆ ಅಂಟಿಸಲಾಗಿದೆ.

ಕೊಡಗಿನಾದ್ಯಂತ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕೊಡಗು ಪೊಲೀಸರು ಮಾದಕ ವಸ್ತುಗಳ ಮಾರಾಟ ಪ್ರಕರಣಗಳಲ್ಲಿ ಹೆಚ್ಚಾಗಿ ಯುವಕರನ್ನು ಬಂಧಿಸುತ್ತಿದ್ದಾರೆ. ಹೀಗಾಗಿ ಮಾದಕ ವಸ್ತುಗಳ ಸೇವನೆ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದ ಸುನ್ನಿ ಮುಸ್ಲಿಂ ಜಮಾತ್ ವಿಶಿಷ್ಟ ಹೆಜ್ಜೆ ಇಟ್ಟಿದೆ. ಗ್ರಾಮದ ಮಸೀದಿ ಆವರಣದ ಹೊರಗೆ, ಜಮಾತ್ ಸಮಿತಿಯು ಮಾದಕ ದ್ರವ್ಯ ಸೇವನೆಯಲ್ಲಿ ತೊಡಗಿರುವ ಯುವಕರನ್ನು ಜಮಾತ್ ಮತ್ತು ಮಸೀದಿಗೆ ಪ್ರವೇಶಿಸುವುದನ್ನು ಬಹಿಷ್ಕರಿಸುವ ಪೋಸ್ಟರ್ ಅನ್ನು ಅಂಟಿಸಿದೆ. ಡ್ರಗ್ಸ್ ಬಳಸುವ ಜನರನ್ನು ನಿಷೇಧಿಸುವುದರ ಜೊತೆಗೆ, ಸ್ಟೈಲ್ ಎಂದು ವಿಲಕ್ಷಣ ಕೇಶವಿನ್ಯಾಸವನ್ನು ಮಾಡಿಸಿಕೊಳ್ಳುವ ಯುವಕರನ್ನೂ ಜಮಾತ್​ನಿಂದ ನಿಷೇಧಿಸಲಾಗಿದೆ. ಮತ್ತು ಹರಿದ ಬಟ್ಟೆಗಳನ್ನು ಧರಿಸಿ ಮಸೀದಿಗೆ ಪ್ರವೇಶಿಸುವುದನ್ನು ಜಮಾತ್ ನಿಷೇಧಿಸಿದೆ.

ಯಾವುದೇ ಯುವಕರು ಅಥವಾ ಇತರ ಯಾವುದೇ ನಿವಾಸಿಗಳು ಮಾದಕ ದ್ರವ್ಯ ಸೇವಿಸುತ್ತಿದ್ದಾರೆ ಎಂಬ ಬಗ್ಗೆ ನಮಗೆ ಶಂಕೆಯಾದ್ರೆ, ನಾವು ಮೊದಲು ಅವರನ್ನು ವಿಚಾರಿಸುತ್ತೇವೆ ಮತ್ತು ಅವರನ್ನು ಮಾದಕ ವ್ಯಸನ ಕೇಂದ್ರಕ್ಕೆ ಸೇರಿಸಬಹುದೇ ಎಂದು ನೋಡುತ್ತೇವೆ. ಜಮಾತ್ ನಿಂದ ಕೌನ್ಸೆಲಿಂಗ್ ಮಾಡಲಾಗುವುದು. ಅವರು ಇನ್ನೂ ಮಾದಕ ದ್ರವ್ಯ ಸೇವನೆಯನ್ನು ಮುಂದುವರಿಸಿದರೆ, ಅವರನ್ನು ಕೊಂಡಂಗೇರಿ ಮಸೀದಿಗೆ ಪ್ರವೇಶಿಸದಂತೆ ಬಹಿಷ್ಕರಿಸಲಾಗುವುದು ಮತ್ತು ಜಮಾತ್ ನಿಂದ ಮದುವೆ ಸಮಾರಂಭದಲ್ಲಿ ನೀಡಲಾದ ಪ್ರಮಾಣಪತ್ರಗಳಲ್ಲಿ ನಾವು ಅದೇ ವಿಷಯವನ್ನು ನಮೂದಿಸುತ್ತೇವೆ ಎಂದು ಜಮ್ಮಾತ್ ಕಚೇರಿ ಕಾರ್ಯದರ್ಶಿ ರಫೀಕ್ ತಿಳಿಸಿದರು.

ನಮ್ಮ ವ್ಯಾಪ್ತಿಗೆ ಬರುವ ಯುವಕರಲ್ಲಿ ಮಾದಕ ವ್ಯಸನ ಸುಳಿವು ಸಿಕ್ಕರೆ ಜಮಾತ್ ನೀಡುವ ಮದುವೆ ಕ್ಲಿಯರೆನ್ಸ್ ಪ್ರಮಾಣಪತ್ರದಲ್ಲಿ ಈ ಬಗ್ಗೆ ನಮೂದಿಸಲಾಗುವುದು. ಪ್ರತಿಯೊಬ್ಬ ನಿವಾಸಿಗೆ ಮದುವೆಯ ಸಮಯದಲ್ಲಿ ಈ ಪ್ರಮಾಣಪತ್ರದ ಅಗತ್ಯವಿದೆ. ಮಾದಕ ದ್ರವ್ಯ ಸೇವನೆಯ ವಿಷಯವನ್ನು ಪ್ರಮಾಣಪತ್ರದಲ್ಲಿ ನಮೂದಿಸಿದರೆ, ಇತರ ಎಲ್ಲ ಜಮಾತ್ಗಳಿಗೆ ಅದರ ಬಗ್ಗೆ ಎಚ್ಚರಿಕೆ ನೀಡಿದಂತಾಗುತ್ತದೆ. ಗ್ರಾಮದಲ್ಲಿ ಯಾವುದೇ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಕಂಡುಬಂದಲ್ಲಿ, ಜಮಾತ್ ಸದಸ್ಯರು ಪೊಲೀಸರೊಂದಿಗೆ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ನೋಡಿಕೊಳ್ಳುತ್ತಾರೆ ಎಂದು ರಫಿಕ್ ಹೇಳಿದರು.

ಮಾದಕ ವ್ಯಸನದ ವಿರುದ್ಧದ ಈ ಮೊದಲ ರೀತಿಯ ಹೋರಾಟದೊಂದಿಗೆ, ಜಿಲ್ಲೆಯ ಇತರ ಎಲ್ಲಾ ಜಮಾತ್ ಗಳು ಸಹ ಅದೇ ಹಾದಿಯಲ್ಲಿ ಸಮುದಾಯದ ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಲು ಜಮಾತ್ ಸಮಿತಿಯು ಆಶಿಸುತ್ತದೆ ಎಂದರು.

lokesh

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

1 hour ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

6 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

6 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

6 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

17 hours ago