ಕೊಡಗು

ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾತ್​​ನಿಂದ ದಿಟ್ಟ ಹೆಜ್ಜೆ : ಮಾದಕ ವ್ಯಾಸನಿಗಳಿಗಿಲ್ಲ ಜಮಾತ್ ಪ್ರವೇಶ

ಮಡಿಕೇರಿ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಬೆಳೆಯುತ್ತಾ ಹೋಗುತ್ತಿದೆ. ಯುವಕರು ಹೆಚ್ಚಾಗಿ ಮಾದಕ ದ್ರವ್ಯಗಳ ದಾಸರಾಗುತ್ತಿದ್ದಾರೆ. ಹೀಗಾಗಿ ತಮ್ಮ ಸಮುದಾಯದ ಯುವಕರು ಮಾದಕ ದ್ರವ್ಯದ ದಾಸರಾಗಬಾರದೆಂದು, ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ ಜಮಾತ್ ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ದ್ರವ್ಯ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಸಂಕ್ಷಿಪ್ತ, ಕಟ್ಟುನಿಟ್ಟಾದ ಸೂಚನೆಯನ್ನು ಕೊಂಡಂಗೇರಿ ಮಸೀದಿಯ ಹೊರಗೆ ಅಂಟಿಸಲಾಗಿದೆ.

ಕೊಡಗಿನಾದ್ಯಂತ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕೊಡಗು ಪೊಲೀಸರು ಮಾದಕ ವಸ್ತುಗಳ ಮಾರಾಟ ಪ್ರಕರಣಗಳಲ್ಲಿ ಹೆಚ್ಚಾಗಿ ಯುವಕರನ್ನು ಬಂಧಿಸುತ್ತಿದ್ದಾರೆ. ಹೀಗಾಗಿ ಮಾದಕ ವಸ್ತುಗಳ ಸೇವನೆ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದ ಸುನ್ನಿ ಮುಸ್ಲಿಂ ಜಮಾತ್ ವಿಶಿಷ್ಟ ಹೆಜ್ಜೆ ಇಟ್ಟಿದೆ. ಗ್ರಾಮದ ಮಸೀದಿ ಆವರಣದ ಹೊರಗೆ, ಜಮಾತ್ ಸಮಿತಿಯು ಮಾದಕ ದ್ರವ್ಯ ಸೇವನೆಯಲ್ಲಿ ತೊಡಗಿರುವ ಯುವಕರನ್ನು ಜಮಾತ್ ಮತ್ತು ಮಸೀದಿಗೆ ಪ್ರವೇಶಿಸುವುದನ್ನು ಬಹಿಷ್ಕರಿಸುವ ಪೋಸ್ಟರ್ ಅನ್ನು ಅಂಟಿಸಿದೆ. ಡ್ರಗ್ಸ್ ಬಳಸುವ ಜನರನ್ನು ನಿಷೇಧಿಸುವುದರ ಜೊತೆಗೆ, ಸ್ಟೈಲ್ ಎಂದು ವಿಲಕ್ಷಣ ಕೇಶವಿನ್ಯಾಸವನ್ನು ಮಾಡಿಸಿಕೊಳ್ಳುವ ಯುವಕರನ್ನೂ ಜಮಾತ್​ನಿಂದ ನಿಷೇಧಿಸಲಾಗಿದೆ. ಮತ್ತು ಹರಿದ ಬಟ್ಟೆಗಳನ್ನು ಧರಿಸಿ ಮಸೀದಿಗೆ ಪ್ರವೇಶಿಸುವುದನ್ನು ಜಮಾತ್ ನಿಷೇಧಿಸಿದೆ.

ಯಾವುದೇ ಯುವಕರು ಅಥವಾ ಇತರ ಯಾವುದೇ ನಿವಾಸಿಗಳು ಮಾದಕ ದ್ರವ್ಯ ಸೇವಿಸುತ್ತಿದ್ದಾರೆ ಎಂಬ ಬಗ್ಗೆ ನಮಗೆ ಶಂಕೆಯಾದ್ರೆ, ನಾವು ಮೊದಲು ಅವರನ್ನು ವಿಚಾರಿಸುತ್ತೇವೆ ಮತ್ತು ಅವರನ್ನು ಮಾದಕ ವ್ಯಸನ ಕೇಂದ್ರಕ್ಕೆ ಸೇರಿಸಬಹುದೇ ಎಂದು ನೋಡುತ್ತೇವೆ. ಜಮಾತ್ ನಿಂದ ಕೌನ್ಸೆಲಿಂಗ್ ಮಾಡಲಾಗುವುದು. ಅವರು ಇನ್ನೂ ಮಾದಕ ದ್ರವ್ಯ ಸೇವನೆಯನ್ನು ಮುಂದುವರಿಸಿದರೆ, ಅವರನ್ನು ಕೊಂಡಂಗೇರಿ ಮಸೀದಿಗೆ ಪ್ರವೇಶಿಸದಂತೆ ಬಹಿಷ್ಕರಿಸಲಾಗುವುದು ಮತ್ತು ಜಮಾತ್ ನಿಂದ ಮದುವೆ ಸಮಾರಂಭದಲ್ಲಿ ನೀಡಲಾದ ಪ್ರಮಾಣಪತ್ರಗಳಲ್ಲಿ ನಾವು ಅದೇ ವಿಷಯವನ್ನು ನಮೂದಿಸುತ್ತೇವೆ ಎಂದು ಜಮ್ಮಾತ್ ಕಚೇರಿ ಕಾರ್ಯದರ್ಶಿ ರಫೀಕ್ ತಿಳಿಸಿದರು.

ನಮ್ಮ ವ್ಯಾಪ್ತಿಗೆ ಬರುವ ಯುವಕರಲ್ಲಿ ಮಾದಕ ವ್ಯಸನ ಸುಳಿವು ಸಿಕ್ಕರೆ ಜಮಾತ್ ನೀಡುವ ಮದುವೆ ಕ್ಲಿಯರೆನ್ಸ್ ಪ್ರಮಾಣಪತ್ರದಲ್ಲಿ ಈ ಬಗ್ಗೆ ನಮೂದಿಸಲಾಗುವುದು. ಪ್ರತಿಯೊಬ್ಬ ನಿವಾಸಿಗೆ ಮದುವೆಯ ಸಮಯದಲ್ಲಿ ಈ ಪ್ರಮಾಣಪತ್ರದ ಅಗತ್ಯವಿದೆ. ಮಾದಕ ದ್ರವ್ಯ ಸೇವನೆಯ ವಿಷಯವನ್ನು ಪ್ರಮಾಣಪತ್ರದಲ್ಲಿ ನಮೂದಿಸಿದರೆ, ಇತರ ಎಲ್ಲ ಜಮಾತ್ಗಳಿಗೆ ಅದರ ಬಗ್ಗೆ ಎಚ್ಚರಿಕೆ ನೀಡಿದಂತಾಗುತ್ತದೆ. ಗ್ರಾಮದಲ್ಲಿ ಯಾವುದೇ ಮಾದಕ ದ್ರವ್ಯ ಸೇವನೆ ಪ್ರಕರಣಗಳು ಕಂಡುಬಂದಲ್ಲಿ, ಜಮಾತ್ ಸದಸ್ಯರು ಪೊಲೀಸರೊಂದಿಗೆ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ನೋಡಿಕೊಳ್ಳುತ್ತಾರೆ ಎಂದು ರಫಿಕ್ ಹೇಳಿದರು.

ಮಾದಕ ವ್ಯಸನದ ವಿರುದ್ಧದ ಈ ಮೊದಲ ರೀತಿಯ ಹೋರಾಟದೊಂದಿಗೆ, ಜಿಲ್ಲೆಯ ಇತರ ಎಲ್ಲಾ ಜಮಾತ್ ಗಳು ಸಹ ಅದೇ ಹಾದಿಯಲ್ಲಿ ಸಮುದಾಯದ ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಲು ಜಮಾತ್ ಸಮಿತಿಯು ಆಶಿಸುತ್ತದೆ ಎಂದರು.

lokesh

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

5 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

17 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

17 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

17 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

17 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

17 hours ago