ಕೊಡಗು

ಜಾನುವಾರು ಗಣತಿಗೆ ಹೈಟೆಕ್ ಸ್ಪರ್ಶ: ಪ್ರತಿ ಮನೆಗೂ ಭೇಟಿ ನೀಡಿ ಫೋನ್‌ನಲ್ಲೇ ಗಣತಿ!

ಮಡಿಕೇರಿ: ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 1 ರಿಂದ ಡಿಸೆಂಬರ್ ಅಂತ್ಯದವರೆಗೂ 4 ತಿಂಗಳ ಕಾಲ ದೇಶಾದ್ಯಂತ ನಡೆಯಲಿದ್ದು, ಜಿಲ್ಲೆಯಲ್ಲಿ ಇದಕ್ಕೆ ಸಿದ್ಧತೆ ನಡೆದಿದ್ದು, ಪ್ರತಿ ಮನೆಗೂ ಗಣತಿದಾರರು ಭೇಟಿ ನೀಡಿ ಅಂಕಿ-ಅಂಶ ದಾಖಲಿಸಲಿದ್ದಾರೆ.

1919 ರಿಂದ ಜಾನುವಾರು ಗಣತಿ ನಡೆಯುತ್ತಾ ಬಂದಿದ್ದು, ಕಳೆದ 100 ವರ್ಷಗಳಲ್ಲಿ 20 ಗಣತಿ ನಡೆದಿದೆ. ಈಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 21ನೇ ಜಾನುವಾರು ಗಣತಿ ನಡೆಯುತ್ತಿದೆ. ಹಿಂದೆಲ್ಲ ಪುಸ್ತಕದಲ್ಲಿ ಗಣತಿ ಕಾರ್ಯ ನಡೆಯುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಸ್ಮಾರ್ಟಫೋನ್ ಬಳಸಿ ಪ್ರತಿ ಮನೆ ಮನೆಗೆ ತೆರಳಿ ಗಣತಿ ಕಾರ್ಯ ನಡೆಯಲಿದೆ.

ಎಲ್ಲವೂ ಕಟ್ಟುನಿಟ್ಟು: ಕೇಂದ್ರ ಪಶುಸಂಗೋಪನಾ ಇಲಾಖೆಯಿಂದಲೇ 21 ನೇ ಲೈವ್ ಸ್ಟಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರ ಬಗ್ಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದ್ದು, ವಿಶೇಷ ಎಂದರೆ ಇದರಲ್ಲಿ ಎಲ್ಲೋ ಕೂತು ಕಾಟಾಚಾರಕ್ಕೆ ಗಣತಿ ಮಾಡಲು ಸಾಧ್ಯವೇ ಇಲ್ಲ, ಏಕೆಂದರೆ ಗಣತಿದಾರರ ಪ್ರತಿ ಚಲನವಲನಗಳು ಇದರಲ್ಲಿ ರೆಕಾರ್ಡ ಆಗಲಿದ್ದು, ಪ್ರತಿ ಸೆಕೆಂಡ್, ಸ್ಥಳ ಎಲ್ಲವೂ ದಾಖಲಾಗಿದೆ.

ಎಲ್ಲವೂ ಆನ್‍ಲೈನ್ ನಲ್ಲೇ: ಈ ಹಿಂದೆ ಜಾನುವಾರು ಗಣತಿ ಮಾಡಬೇಕಾದರೆ ಪುಸ್ತಕದಲ್ಲಿ 200 ಕಾಲಂಗಳನ್ನು ಭರ್ತಿ ಮಾಡಬೇಕಾಗಿತ್ತು. ಆದರೆ ಈ ಬಾರಿ ಚುಟುಕಾಗಿ ಆಪ್ ಮೂಲಕ ಮಾಹಿತಿ ನಮೂದಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆಪ್ ನೆಟ್ವರ್ಕ ಪ್ರದೇಶಕ್ಕೆ ಬರುತ್ತಿದ್ದಂತೆಯೇ ಕೇಂದ್ರ ಸರ್ವರ್ ಜತೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ವಿನ್ಯಾಸಪಡಿಸಲಾಗಿದೆ,ಹೀಗಾಗಿ ಎಲ್ಲವೂ ಕರಾರುವಕ್ಕಾಗಿ ನಮೂದಾಗಲಿದೆ.

ಎಷ್ಟು ಗಣತಿದಾರರು?: ಜಾನುವಾರು ಗಣತಿಗಾಗಿ ಒಟ್ಟು ಕೊಡಗು ಜಿಲ್ಲೆಯಲ್ಲಿ 59 ಗಣತಿದಾರರು, 12 ಮೇಲ್ವಿಚಾರಕರು ಇರುತ್ತಾರೆ, ಗಣತಿದಾರರು ಮನೆಮನೆಗೆ ತೆರಳಿದರೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಅದರ ಒಟ್ಟು ಉಸ್ತುವಾರಿ ವಹಿಸಲಿದ್ದಾರೆ, ನಗರ ಭಾಗದಲ್ಲಿ 4500 ಮನೆಗಳಿಗೊಬ್ಬ ಗಣತಿದಾರ ಇದ್ದರೆ, ಗ್ರಾಮೀಣ ಭಾಗದಲ್ಲಿ 2500 ಮನೆಗಳಿಗೊಬ್ಬ ಗಣತಿದಾರ ಇರುತ್ತಾರೆ, ಪ್ರತಿಯೊಬ್ಬರೂ ಮನೆಗಳಿಗೆ ಭೇಟಿ ನೀಡಿ ಗಣತಿ ನಡೆಸುವುದು ಕಡ್ಡಾಯವಾಗಿದೆ.

ಹೇಗೆ ನಡೆಯಲಿದೆ ಗಣತಿ?: ಯಾವ ತಳಿಯ ಜಾನುವಾರುಗಳು? ವಯಸ್ಸು ಎಷ್ಟು? ಎಷ್ಟು ರೈತರು? ಯಾವ ವರ್ಗದ ರೈತರು? ಎಷ್ಟು ಮಹಿಳೆಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ದಾಖಲಿಸಬೇಕು. ಆ ಮೂಲಕ ಸರ್ಕಾರ ತಮ್ಮ ಮುಂದಿನ ಯೋಜನೆಯನ್ನು ಸಿದ್ಧ್ದಪಡಿಸುವುದು ಇದರ ಮುಖ್ಯ ಉದ್ದೇಶ, ರೈತರು ಹಾಗೂ ಹೈನುಗಾರಿಕೆ ಕ್ಷೇತ್ರಗಳಿಗೆ ಬೇಕಾದ ನೀತಿ, ಕಾರ್ಯಕ್ರಮ ನಿರೂಪಿಸುವುದಕ್ಕಾಗಿ ಗಣತಿಯ ಅಂಶಗಳು ಬಳಕೆಯಾಗುತ್ತವೆ.

ಮನೆಗಳಲ್ಲಿ ಸಾಕಲಾಗುವ ದನ, ಎತ್ತು, ಎಮ್ಮೆ, ಕೋಣ, ಆಡು, ಕುರಿ, ಕೋಳಿ, ನಾಯಿ, ಕುದುರೆ, ಎಮು ಹಾಗೂ ಆಸ್ಟ್ರಿಚ್ ಹಕ್ಕಿಗಳ ಮಾಹಿತಿ ಪಡೆಯಲಾಗುತ್ತದೆ, ಬೀಡಾಡಿ ದನ, ನಾಯಿಗಳ ಮಾಹಿತಿಯನ್ನು ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಆನೆ, ದನ ಸಾಕುವುದಿದ್ದರೆ, ಗೋಶಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10ಕ್ಕಿಂತ ಜಾಸ್ತಿ ದನಗಳಿದ್ದರೆ, 1000 ಕ್ಕಿಂತ ಹೆಚ್ಚು ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಾಣೆ ಇದ್ದರೆ ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸಿಕೊಳ್ಳಲು ನಿರ್ಧರಿಸಲಾಗಿದೆ.

ಎಲ್ಲರಿಗೂ ತರಬೇತಿ: ಜಾನುವಾರು ಗಣತಿ ಸಂಬಂಧ ಮಾಸ್ಟರ್ ಟ್ರೇನರ್ ಗಳ ತರಬೇತಿ ಪೂರ್ಣಗೊಂಡಿದ್ದು, ಎಲ್ಲಾ ಮೆಲ್ವಿಚಾರಕರಿಗೆ ಹಾಗೂ ಎಣಿಕೆದಾರರಿಗೆ ಜಿಲ್ಲೆಯ ಮಾಸ್ಟರ್ ಟ್ರೇನರ್‍ಗಳ ಮೂಲಕ ತರಬೇತಿ ಕಾರ್ಯಕ್ರಮವೂ ಪೂರ್ಣಗೊಂಡಿದೆ ಹಾಗೂ ಸೆಪ್ಟೆಂಬರ್ 1 ರಿಂದ ಗಣತಿಕಾರ್ಯಕ್ಕೆ ಎಲ್ಲಾ ತಯಾರಿಯೂ ನಡೆದಿದೆ.

2019 ರಲ್ಲಿ ಎಷ್ಟಿತ್ತು?: 2019ರಲ್ಲಿ ನಡೆದಿದ್ದ ಜಾನುವಾರು ಗಣತಿಯಲ್ಲಿ ಜಿಲ್ಲೆಯಲ್ಲಿ 71,684 ಹಸುಗಳು, 5,236 ಎಮ್ಮೆಗಳು, 650 ಕುರಿಗಳು ಹಾಗೂ 7,603 ಮೆಕೆಗಳು, 8365 ಹಂದಿಗಳು ಇದ್ದವು, ಆದರೆ ಈ ಬಾರಿ ಸಾಕಷ್ಟು ಏರಿಳಿತ ಆಗುವ ನಿರೀಕ್ಷೆ ಇದೆ. ಏಕೆಂದರೆ ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳಲ್ಲಿ ನಗರೀಕರಣವಾಗಿದೆ, ಅಲ್ಲದೇ ಕೃಷಿಯಲ್ಲೂ ಬದಲಾವಣೆಯಾಗಿದ್ದು ಇದು ಜಾನುವಾರು ಸಾಕಾಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಬಾರಿ ಏನಾಗಬಹುದು?: ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕರಿಮೆಣಸು ಬೆಳೆಯುವ ಉದ್ದೇಶ ಹೆಚ್ಚಾಗಿರುವುದರಿಂದ ದಿನ ಕಳೆದಂತೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿಕೊಳ್ಳುವ ರೈತರ ಸಂಖ್ಯೆ ಕಡಿಮೆಯಾಗುತ್ತಿದ್ದು ಒಟ್ಟಾರೆ ಜಾನುವಾರು ಸಂಖ್ಯೆಯಲ್ಲಿ ಇಳಿಮುಖವಾಗಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

4 hours ago