ಕೊಡಗು

ಜಾನುವಾರು ಗಣತಿಗೆ ಹೈಟೆಕ್ ಸ್ಪರ್ಶ: ಪ್ರತಿ ಮನೆಗೂ ಭೇಟಿ ನೀಡಿ ಫೋನ್‌ನಲ್ಲೇ ಗಣತಿ!

ಮಡಿಕೇರಿ: ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 1 ರಿಂದ ಡಿಸೆಂಬರ್ ಅಂತ್ಯದವರೆಗೂ 4 ತಿಂಗಳ ಕಾಲ ದೇಶಾದ್ಯಂತ ನಡೆಯಲಿದ್ದು, ಜಿಲ್ಲೆಯಲ್ಲಿ ಇದಕ್ಕೆ ಸಿದ್ಧತೆ ನಡೆದಿದ್ದು, ಪ್ರತಿ ಮನೆಗೂ ಗಣತಿದಾರರು ಭೇಟಿ ನೀಡಿ ಅಂಕಿ-ಅಂಶ ದಾಖಲಿಸಲಿದ್ದಾರೆ.

1919 ರಿಂದ ಜಾನುವಾರು ಗಣತಿ ನಡೆಯುತ್ತಾ ಬಂದಿದ್ದು, ಕಳೆದ 100 ವರ್ಷಗಳಲ್ಲಿ 20 ಗಣತಿ ನಡೆದಿದೆ. ಈಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 21ನೇ ಜಾನುವಾರು ಗಣತಿ ನಡೆಯುತ್ತಿದೆ. ಹಿಂದೆಲ್ಲ ಪುಸ್ತಕದಲ್ಲಿ ಗಣತಿ ಕಾರ್ಯ ನಡೆಯುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಸ್ಮಾರ್ಟಫೋನ್ ಬಳಸಿ ಪ್ರತಿ ಮನೆ ಮನೆಗೆ ತೆರಳಿ ಗಣತಿ ಕಾರ್ಯ ನಡೆಯಲಿದೆ.

ಎಲ್ಲವೂ ಕಟ್ಟುನಿಟ್ಟು: ಕೇಂದ್ರ ಪಶುಸಂಗೋಪನಾ ಇಲಾಖೆಯಿಂದಲೇ 21 ನೇ ಲೈವ್ ಸ್ಟಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರ ಬಗ್ಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದ್ದು, ವಿಶೇಷ ಎಂದರೆ ಇದರಲ್ಲಿ ಎಲ್ಲೋ ಕೂತು ಕಾಟಾಚಾರಕ್ಕೆ ಗಣತಿ ಮಾಡಲು ಸಾಧ್ಯವೇ ಇಲ್ಲ, ಏಕೆಂದರೆ ಗಣತಿದಾರರ ಪ್ರತಿ ಚಲನವಲನಗಳು ಇದರಲ್ಲಿ ರೆಕಾರ್ಡ ಆಗಲಿದ್ದು, ಪ್ರತಿ ಸೆಕೆಂಡ್, ಸ್ಥಳ ಎಲ್ಲವೂ ದಾಖಲಾಗಿದೆ.

ಎಲ್ಲವೂ ಆನ್‍ಲೈನ್ ನಲ್ಲೇ: ಈ ಹಿಂದೆ ಜಾನುವಾರು ಗಣತಿ ಮಾಡಬೇಕಾದರೆ ಪುಸ್ತಕದಲ್ಲಿ 200 ಕಾಲಂಗಳನ್ನು ಭರ್ತಿ ಮಾಡಬೇಕಾಗಿತ್ತು. ಆದರೆ ಈ ಬಾರಿ ಚುಟುಕಾಗಿ ಆಪ್ ಮೂಲಕ ಮಾಹಿತಿ ನಮೂದಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆಪ್ ನೆಟ್ವರ್ಕ ಪ್ರದೇಶಕ್ಕೆ ಬರುತ್ತಿದ್ದಂತೆಯೇ ಕೇಂದ್ರ ಸರ್ವರ್ ಜತೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ವಿನ್ಯಾಸಪಡಿಸಲಾಗಿದೆ,ಹೀಗಾಗಿ ಎಲ್ಲವೂ ಕರಾರುವಕ್ಕಾಗಿ ನಮೂದಾಗಲಿದೆ.

ಎಷ್ಟು ಗಣತಿದಾರರು?: ಜಾನುವಾರು ಗಣತಿಗಾಗಿ ಒಟ್ಟು ಕೊಡಗು ಜಿಲ್ಲೆಯಲ್ಲಿ 59 ಗಣತಿದಾರರು, 12 ಮೇಲ್ವಿಚಾರಕರು ಇರುತ್ತಾರೆ, ಗಣತಿದಾರರು ಮನೆಮನೆಗೆ ತೆರಳಿದರೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಅದರ ಒಟ್ಟು ಉಸ್ತುವಾರಿ ವಹಿಸಲಿದ್ದಾರೆ, ನಗರ ಭಾಗದಲ್ಲಿ 4500 ಮನೆಗಳಿಗೊಬ್ಬ ಗಣತಿದಾರ ಇದ್ದರೆ, ಗ್ರಾಮೀಣ ಭಾಗದಲ್ಲಿ 2500 ಮನೆಗಳಿಗೊಬ್ಬ ಗಣತಿದಾರ ಇರುತ್ತಾರೆ, ಪ್ರತಿಯೊಬ್ಬರೂ ಮನೆಗಳಿಗೆ ಭೇಟಿ ನೀಡಿ ಗಣತಿ ನಡೆಸುವುದು ಕಡ್ಡಾಯವಾಗಿದೆ.

ಹೇಗೆ ನಡೆಯಲಿದೆ ಗಣತಿ?: ಯಾವ ತಳಿಯ ಜಾನುವಾರುಗಳು? ವಯಸ್ಸು ಎಷ್ಟು? ಎಷ್ಟು ರೈತರು? ಯಾವ ವರ್ಗದ ರೈತರು? ಎಷ್ಟು ಮಹಿಳೆಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ದಾಖಲಿಸಬೇಕು. ಆ ಮೂಲಕ ಸರ್ಕಾರ ತಮ್ಮ ಮುಂದಿನ ಯೋಜನೆಯನ್ನು ಸಿದ್ಧ್ದಪಡಿಸುವುದು ಇದರ ಮುಖ್ಯ ಉದ್ದೇಶ, ರೈತರು ಹಾಗೂ ಹೈನುಗಾರಿಕೆ ಕ್ಷೇತ್ರಗಳಿಗೆ ಬೇಕಾದ ನೀತಿ, ಕಾರ್ಯಕ್ರಮ ನಿರೂಪಿಸುವುದಕ್ಕಾಗಿ ಗಣತಿಯ ಅಂಶಗಳು ಬಳಕೆಯಾಗುತ್ತವೆ.

ಮನೆಗಳಲ್ಲಿ ಸಾಕಲಾಗುವ ದನ, ಎತ್ತು, ಎಮ್ಮೆ, ಕೋಣ, ಆಡು, ಕುರಿ, ಕೋಳಿ, ನಾಯಿ, ಕುದುರೆ, ಎಮು ಹಾಗೂ ಆಸ್ಟ್ರಿಚ್ ಹಕ್ಕಿಗಳ ಮಾಹಿತಿ ಪಡೆಯಲಾಗುತ್ತದೆ, ಬೀಡಾಡಿ ದನ, ನಾಯಿಗಳ ಮಾಹಿತಿಯನ್ನು ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಆನೆ, ದನ ಸಾಕುವುದಿದ್ದರೆ, ಗೋಶಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10ಕ್ಕಿಂತ ಜಾಸ್ತಿ ದನಗಳಿದ್ದರೆ, 1000 ಕ್ಕಿಂತ ಹೆಚ್ಚು ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಾಣೆ ಇದ್ದರೆ ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸಿಕೊಳ್ಳಲು ನಿರ್ಧರಿಸಲಾಗಿದೆ.

ಎಲ್ಲರಿಗೂ ತರಬೇತಿ: ಜಾನುವಾರು ಗಣತಿ ಸಂಬಂಧ ಮಾಸ್ಟರ್ ಟ್ರೇನರ್ ಗಳ ತರಬೇತಿ ಪೂರ್ಣಗೊಂಡಿದ್ದು, ಎಲ್ಲಾ ಮೆಲ್ವಿಚಾರಕರಿಗೆ ಹಾಗೂ ಎಣಿಕೆದಾರರಿಗೆ ಜಿಲ್ಲೆಯ ಮಾಸ್ಟರ್ ಟ್ರೇನರ್‍ಗಳ ಮೂಲಕ ತರಬೇತಿ ಕಾರ್ಯಕ್ರಮವೂ ಪೂರ್ಣಗೊಂಡಿದೆ ಹಾಗೂ ಸೆಪ್ಟೆಂಬರ್ 1 ರಿಂದ ಗಣತಿಕಾರ್ಯಕ್ಕೆ ಎಲ್ಲಾ ತಯಾರಿಯೂ ನಡೆದಿದೆ.

2019 ರಲ್ಲಿ ಎಷ್ಟಿತ್ತು?: 2019ರಲ್ಲಿ ನಡೆದಿದ್ದ ಜಾನುವಾರು ಗಣತಿಯಲ್ಲಿ ಜಿಲ್ಲೆಯಲ್ಲಿ 71,684 ಹಸುಗಳು, 5,236 ಎಮ್ಮೆಗಳು, 650 ಕುರಿಗಳು ಹಾಗೂ 7,603 ಮೆಕೆಗಳು, 8365 ಹಂದಿಗಳು ಇದ್ದವು, ಆದರೆ ಈ ಬಾರಿ ಸಾಕಷ್ಟು ಏರಿಳಿತ ಆಗುವ ನಿರೀಕ್ಷೆ ಇದೆ. ಏಕೆಂದರೆ ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳಲ್ಲಿ ನಗರೀಕರಣವಾಗಿದೆ, ಅಲ್ಲದೇ ಕೃಷಿಯಲ್ಲೂ ಬದಲಾವಣೆಯಾಗಿದ್ದು ಇದು ಜಾನುವಾರು ಸಾಕಾಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಬಾರಿ ಏನಾಗಬಹುದು?: ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕರಿಮೆಣಸು ಬೆಳೆಯುವ ಉದ್ದೇಶ ಹೆಚ್ಚಾಗಿರುವುದರಿಂದ ದಿನ ಕಳೆದಂತೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿಕೊಳ್ಳುವ ರೈತರ ಸಂಖ್ಯೆ ಕಡಿಮೆಯಾಗುತ್ತಿದ್ದು ಒಟ್ಟಾರೆ ಜಾನುವಾರು ಸಂಖ್ಯೆಯಲ್ಲಿ ಇಳಿಮುಖವಾಗಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago