ಕೊಡಗು

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ – ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ.

ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ.

ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ ಇಲ್ಲಿ ಸುಮಾರು 80ಕ್ಕೂ ಅಧಿಕ ಎಕರೆ ಜಾಗವನ್ನು ಸ್ಥಳೀಯರು ಆಂಧ್ರ ಮೂಲದ ಉದ್ಯಮಿಗಳಿಗೆ ಮಾರಾಟ ಮಾಡಿದ್ದರು. ಅಪ್ಪಾರಾವ್, ಸುಬ್ಬಯಮ್ಮ ಮತ್ತು ವೇಂಕಟೇಶ್ವರ ರವಿ ರೆಡ್ಡಿ ಎಂಬವರು ಈ ಬೆಟ್ಟದ ಮಾಲೀಕರಾಗಿದ್ದಾರೆ. ಇದರಲ್ಲಿ 38 ಎಕರೆ ಜಾಗದಲ್ಲಿ ಜೆಸಿಬಿ ಬಳಸಿ ಬೆಟ್ಟವನ್ನ ಸಮತಟ್ಟುಗೊಳಿಸಲಾಗುತ್ತಿದೆ.

 ಅಲ್ಲದೇ ಖಾಸಗಿ ಜಾಗ ಎಂದು ಹೇಳಿಕೊಳ್ಳುವ ಜಾಗದ ಮಾಲೀಕರು ಜಾಗದಲ್ಲಿದ್ದ ನೂರಾರು ಮರಗಳ ಮಾರಣಹೋಮ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಈ ಮರಗಳ ಕಟಾವಿಗೆ ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಫ್‍ಒ ಪೂವಯ್ಯ, ತಮ್ಮ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಮಾರು 80 ರಿಂದ 100 ಮರಗಳು ನಾಶವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ ಜಾಗದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ 2018 ಮತ್ತು 2019ರಲ್ಲಿ ಭೀಕರ ಜಲಪ್ರಳಯ ಮತ್ತು ಭೂಕುಸಿತ ಸಂಭವಿಸಿತ್ತು. ಈ ದುರಂತಕ್ಕೆ ಪ್ರಕೃತಿಯ ಮೇಲೆ ಮಾನವನ ಅತಿಯಾದ ಹಸ್ತಕ್ಷೇಪವೂ ಒಂದು ಕಾರಣ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಆದರೂ ಈ ಎಚ್ಚರಿಕೆಯ ನಡುವೆ ಜಿಲ್ಲೆಯಲ್ಲಿ ಪ್ರಕೃತಿಯ ಮೇಲೆ ನಿರಂತರ ದಾಳಿ ನಡೆಯುತ್ತಿದೆ.

lokesh

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

1 hour ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

2 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

3 hours ago