ಕೊಡಗು

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ – ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ.

ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ.

ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ ಇಲ್ಲಿ ಸುಮಾರು 80ಕ್ಕೂ ಅಧಿಕ ಎಕರೆ ಜಾಗವನ್ನು ಸ್ಥಳೀಯರು ಆಂಧ್ರ ಮೂಲದ ಉದ್ಯಮಿಗಳಿಗೆ ಮಾರಾಟ ಮಾಡಿದ್ದರು. ಅಪ್ಪಾರಾವ್, ಸುಬ್ಬಯಮ್ಮ ಮತ್ತು ವೇಂಕಟೇಶ್ವರ ರವಿ ರೆಡ್ಡಿ ಎಂಬವರು ಈ ಬೆಟ್ಟದ ಮಾಲೀಕರಾಗಿದ್ದಾರೆ. ಇದರಲ್ಲಿ 38 ಎಕರೆ ಜಾಗದಲ್ಲಿ ಜೆಸಿಬಿ ಬಳಸಿ ಬೆಟ್ಟವನ್ನ ಸಮತಟ್ಟುಗೊಳಿಸಲಾಗುತ್ತಿದೆ.

 ಅಲ್ಲದೇ ಖಾಸಗಿ ಜಾಗ ಎಂದು ಹೇಳಿಕೊಳ್ಳುವ ಜಾಗದ ಮಾಲೀಕರು ಜಾಗದಲ್ಲಿದ್ದ ನೂರಾರು ಮರಗಳ ಮಾರಣಹೋಮ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಈ ಮರಗಳ ಕಟಾವಿಗೆ ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಫ್‍ಒ ಪೂವಯ್ಯ, ತಮ್ಮ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಮಾರು 80 ರಿಂದ 100 ಮರಗಳು ನಾಶವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ ಜಾಗದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ 2018 ಮತ್ತು 2019ರಲ್ಲಿ ಭೀಕರ ಜಲಪ್ರಳಯ ಮತ್ತು ಭೂಕುಸಿತ ಸಂಭವಿಸಿತ್ತು. ಈ ದುರಂತಕ್ಕೆ ಪ್ರಕೃತಿಯ ಮೇಲೆ ಮಾನವನ ಅತಿಯಾದ ಹಸ್ತಕ್ಷೇಪವೂ ಒಂದು ಕಾರಣ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಆದರೂ ಈ ಎಚ್ಚರಿಕೆಯ ನಡುವೆ ಜಿಲ್ಲೆಯಲ್ಲಿ ಪ್ರಕೃತಿಯ ಮೇಲೆ ನಿರಂತರ ದಾಳಿ ನಡೆಯುತ್ತಿದೆ.

lokesh

Recent Posts

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

30 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

53 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago