ಕೊಡಗು

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ – ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ.

ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ.

ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ ಇಲ್ಲಿ ಸುಮಾರು 80ಕ್ಕೂ ಅಧಿಕ ಎಕರೆ ಜಾಗವನ್ನು ಸ್ಥಳೀಯರು ಆಂಧ್ರ ಮೂಲದ ಉದ್ಯಮಿಗಳಿಗೆ ಮಾರಾಟ ಮಾಡಿದ್ದರು. ಅಪ್ಪಾರಾವ್, ಸುಬ್ಬಯಮ್ಮ ಮತ್ತು ವೇಂಕಟೇಶ್ವರ ರವಿ ರೆಡ್ಡಿ ಎಂಬವರು ಈ ಬೆಟ್ಟದ ಮಾಲೀಕರಾಗಿದ್ದಾರೆ. ಇದರಲ್ಲಿ 38 ಎಕರೆ ಜಾಗದಲ್ಲಿ ಜೆಸಿಬಿ ಬಳಸಿ ಬೆಟ್ಟವನ್ನ ಸಮತಟ್ಟುಗೊಳಿಸಲಾಗುತ್ತಿದೆ.

 ಅಲ್ಲದೇ ಖಾಸಗಿ ಜಾಗ ಎಂದು ಹೇಳಿಕೊಳ್ಳುವ ಜಾಗದ ಮಾಲೀಕರು ಜಾಗದಲ್ಲಿದ್ದ ನೂರಾರು ಮರಗಳ ಮಾರಣಹೋಮ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಈ ಮರಗಳ ಕಟಾವಿಗೆ ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಫ್‍ಒ ಪೂವಯ್ಯ, ತಮ್ಮ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಮಾರು 80 ರಿಂದ 100 ಮರಗಳು ನಾಶವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ ಜಾಗದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ 2018 ಮತ್ತು 2019ರಲ್ಲಿ ಭೀಕರ ಜಲಪ್ರಳಯ ಮತ್ತು ಭೂಕುಸಿತ ಸಂಭವಿಸಿತ್ತು. ಈ ದುರಂತಕ್ಕೆ ಪ್ರಕೃತಿಯ ಮೇಲೆ ಮಾನವನ ಅತಿಯಾದ ಹಸ್ತಕ್ಷೇಪವೂ ಒಂದು ಕಾರಣ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಆದರೂ ಈ ಎಚ್ಚರಿಕೆಯ ನಡುವೆ ಜಿಲ್ಲೆಯಲ್ಲಿ ಪ್ರಕೃತಿಯ ಮೇಲೆ ನಿರಂತರ ದಾಳಿ ನಡೆಯುತ್ತಿದೆ.

lokesh

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago