ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ ರವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸುವ ವೇಳೆ ಮತ್ತೋಂದು ಶಿಫ್ಟ್ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೇ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಮೇಲೆ ವಾಹನ ಹರಿಸಿ ತಪ್ಪಿಸಿಕೊಂಡಿದ್ದಾನೆ.
ಸಂಚಾರಿ ಪೊಲೀಸ್ ಸಿಬ್ಬಂದಿಯು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆತನ ಬೆನ್ನಟ್ಟಿದರೂ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ. ಪೊಲೀಸ್ ಪೇದೆ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ ಸೆರೆಮನೆಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿ ಸರೆಮನೆಗೆ ಅಟ್ಟಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…