ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ ರವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸುವ ವೇಳೆ ಮತ್ತೋಂದು ಶಿಫ್ಟ್ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೇ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಮೇಲೆ ವಾಹನ ಹರಿಸಿ ತಪ್ಪಿಸಿಕೊಂಡಿದ್ದಾನೆ.
ಸಂಚಾರಿ ಪೊಲೀಸ್ ಸಿಬ್ಬಂದಿಯು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆತನ ಬೆನ್ನಟ್ಟಿದರೂ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ. ಪೊಲೀಸ್ ಪೇದೆ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ ಸೆರೆಮನೆಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿ ಸರೆಮನೆಗೆ ಅಟ್ಟಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…