ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ ರವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸುವ ವೇಳೆ ಮತ್ತೋಂದು ಶಿಫ್ಟ್ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೇ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಮೇಲೆ ವಾಹನ ಹರಿಸಿ ತಪ್ಪಿಸಿಕೊಂಡಿದ್ದಾನೆ.
ಸಂಚಾರಿ ಪೊಲೀಸ್ ಸಿಬ್ಬಂದಿಯು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆತನ ಬೆನ್ನಟ್ಟಿದರೂ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ. ಪೊಲೀಸ್ ಪೇದೆ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ ಸೆರೆಮನೆಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿ ಸರೆಮನೆಗೆ ಅಟ್ಟಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…