ಕೊಡಗು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಖುಷಿಯಲ್ಲಿದ್ದ ಬಾಲಕಿಯ ದಾರುಣ್ಯ ಹತ್ಯೆ ಜಿಲ್ಲೆಯ ಸೋಮವಾರ ಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.
ಸೂರ್ಲಬ್ಬಿ ಗ್ರಾಮದ ಓಂಕಾರಪ್ಪ (32 ವರ್ಷ) ಬಾಲಕಿಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಹತ್ಯೆಗೀಡಾದ ದುರ್ದೈವಿ.
ನಿನ್ನೆ (ಮೇ.9, ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಅದೇ ದಿನ ತಡರಾತ್ರಿ ಬಾಲಕಿಯ ಮನೆಗೆ ನುಗ್ಗಿದ ಆರೋಪಿ ಓಂಕಾರಪ್ಪ ಯುವತಿಯನ್ನು ಎಳೆದೊಯ್ದು ನಿರ್ಜನ ಪ್ರದೇಶದಲ್ಲಿ ರುಂಡ-ಮುಂಡ ಬೇರೆಯಾಗುವಂತೆ ಕತ್ತರಿಸಿ ಹಾಕಿ, ಪರಾರಿಯಾಗಿದ್ದಾನೆ. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೇರುವ ಕನಸು ಕಂಡಿದ್ದ ಮೀನಾಳನ್ನು ಆರೋಪಿ ಹತ್ಯೆ ಮಾಡಿದ್ದಾನೆ.
ಕೊಲೆಗೆ ಕಾರಣವೇನು?: ಓಂಕಾರಪ್ಪ, ಮೀನಾಳನ್ನು ಮದುವೆಯಾಗಬೇಕು ಎಂದುಕೊಂಡಿದ್ದ. ಈ ಸಂಬಂಧ ಆಕೆಯೊಂದಿಗೆ ನಿಶ್ಚಿತಾರ್ಥ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರು ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಂದ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದು ಎರಡು ಕುಟುಂಬಗಳಿಗೂ ಬುದ್ದಿ ಹೇಳಿ ಹೋಗಿದ್ದಾರೆ. ಈ ಘಟನೆಯಿಂದ ಸಿಟ್ಟಾದ ಓಂಕಾರಪ್ಪ ಯುವತಿಯ ಮೇಲೆ ವಿಕೃತಿ ಮರೆದಿದ್ದಾನೆ.
ಈ ಹತ್ಯೆ ಸಂಬಂಧ ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…