ಕೊಡಗು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಖುಷಿಯಲ್ಲಿದ್ದ ಬಾಲಕಿಯ ದಾರುಣ್ಯ ಹತ್ಯೆ ಜಿಲ್ಲೆಯ ಸೋಮವಾರ ಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.
ಸೂರ್ಲಬ್ಬಿ ಗ್ರಾಮದ ಓಂಕಾರಪ್ಪ (32 ವರ್ಷ) ಬಾಲಕಿಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಹತ್ಯೆಗೀಡಾದ ದುರ್ದೈವಿ.
ನಿನ್ನೆ (ಮೇ.9, ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಅದೇ ದಿನ ತಡರಾತ್ರಿ ಬಾಲಕಿಯ ಮನೆಗೆ ನುಗ್ಗಿದ ಆರೋಪಿ ಓಂಕಾರಪ್ಪ ಯುವತಿಯನ್ನು ಎಳೆದೊಯ್ದು ನಿರ್ಜನ ಪ್ರದೇಶದಲ್ಲಿ ರುಂಡ-ಮುಂಡ ಬೇರೆಯಾಗುವಂತೆ ಕತ್ತರಿಸಿ ಹಾಕಿ, ಪರಾರಿಯಾಗಿದ್ದಾನೆ. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೇರುವ ಕನಸು ಕಂಡಿದ್ದ ಮೀನಾಳನ್ನು ಆರೋಪಿ ಹತ್ಯೆ ಮಾಡಿದ್ದಾನೆ.
ಕೊಲೆಗೆ ಕಾರಣವೇನು?: ಓಂಕಾರಪ್ಪ, ಮೀನಾಳನ್ನು ಮದುವೆಯಾಗಬೇಕು ಎಂದುಕೊಂಡಿದ್ದ. ಈ ಸಂಬಂಧ ಆಕೆಯೊಂದಿಗೆ ನಿಶ್ಚಿತಾರ್ಥ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರು ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಂದ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದು ಎರಡು ಕುಟುಂಬಗಳಿಗೂ ಬುದ್ದಿ ಹೇಳಿ ಹೋಗಿದ್ದಾರೆ. ಈ ಘಟನೆಯಿಂದ ಸಿಟ್ಟಾದ ಓಂಕಾರಪ್ಪ ಯುವತಿಯ ಮೇಲೆ ವಿಕೃತಿ ಮರೆದಿದ್ದಾನೆ.
ಈ ಹತ್ಯೆ ಸಂಬಂಧ ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…