ಕೊಡಗು

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ

ಕೃಷ್ಣ ಸಿದ್ದಾಪುರ

ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ತವರಿನಲ್ಲೇ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ- ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ತ್ಯಾಜ್ಯ ವಿಲೇವಾರಿಗೆ ಸೂಕ್ತ ವ್ಯವಸ್ಥೆಯ ಕೊರತೆಯಿಂದಾಗಿ ನದಿ ದಡ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ರಾಶಿಗಳು ಹೆಚ್ಚಾಗುತ್ತಿದ್ದು, ಇದರಿಂದ ನದಿ ನೀರಿನ ಗುಣಮಟ್ಟ ಹದಗೆಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಮಗಳ ಚರಂಡಿಗಳ ಮೂಲಕ ಕಲುಷಿತ ನೀರು ನೇರವಾಗಿ ನದಿಗೆ ಸೇರುತ್ತಿದ್ದು, ರಾತ್ರಿ ವೇಳೆಗಳಲ್ಲಿ ಕಾಫಿ ಪಲ್ಪಿಂಗ್ ಘಟಕಗಳಿಂದ ಹೊರಬರುವ ಮಲೀನ ನೀರನ್ನೂ ನಿಯಂತ್ರಣವಿಲ್ಲದೆ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮವಾಗಿ ಜಲಚರಗಳ ಜೀವಚಕ್ರ ಹಾನಿಗೊಳಗಾಗುತ್ತಿದೆ ಎಂದು ಪರಿಸರ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪರಿಶೀಲನೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ನದಿ ನೀರು ಜಾನುವಾರುಗಳಿಗೆ ಸಹ ಕುಡಿಯಲು ಯೋಗ್ಯವಲ್ಲ ಎಂಬ ವರದಿ ನೀಡಿದ್ದರೂ, ಮುಂಜಾಗ್ರತಾ ಕ್ರಮ ವಹಿಸುತ್ತಿಲ್ಲ. ನದಿ ದಡದಲ್ಲಿ ತ್ಯಾಜ್ಯ ರಾಶಿಗಳು ಹೆಚ್ಚುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.

ಗ್ರಾಮದ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತ್ಯಾಜ್ಯದ ದುರ್ವಾಸನೆ ನಡುವೆ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಬರುವ ಪ್ರವಾಸಿಗರಿಗೂ ಪರಿಸರ ಮಾನದಂಡಗಳ ಬಗ್ಗೆ ಕೆಟ್ಟ ಸಂದೇಶ ರವಾನೆಯಾಗುತ್ತಿದೆ ಎಂದು ಸ್ಥಳೀಯರು ವಿಷಾದ ವ್ಯಕ್ತಪಡಿಸಿದ್ದಾರೆ.

ಹಿಂದೆ ಡಾಮಿನೋಸ್ ಯುವಕ ಸಂಘದ ಕಾರ್ಯಕರ್ತರು ನದಿ ದಡವನ್ನು ಸ್ವಚ್ಛಗೊಳಿಸಿ ಹೂವಿನ ಗಿಡಗಳನ್ನು ನೆಟ್ಟು ಪರಿಸರ ಸುಂದರೀಕರಣಕ್ಕೆ ಮುಂದಾಗಿದ್ದರು. ಆದರೆ ನಿರಂತರ ಪಾಲನೆಗೆ ಪಂಚಾಯಿತಿಯಿಂದ ಅಗತ್ಯ ಸಹಕಾರ ಲಭ್ಯವಾಗದ ಕಾರಣ ಆ ಪ್ರಯತ್ನಗಳು ಸ್ಥಿರವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ನಡೆಯುತ್ತಿದ್ದ ಸ್ವಚ್ಛತಾ ಅಭಿಯಾನಗಳು ಆಡಳಿತಾತ್ಮಕ ಬೆಂಬಲದ ಕೊರತೆಯಿಂದ ದುರ್ಬಲಗೊಂಡಿವೆ ಎನ್ನಲಾಗಿದೆ.

ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಸ್ಥಳ ಗುರುತಿಸದಿರುವುದು ಸಮಸ್ಯೆಯ ಮೂಲ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವ ವ್ಯವಸ್ಥೆ ರೂಪಿಸದಿದ್ದರೆ ನದಿ ಪರಿಸರದ ಮೇಲೆ ಪರಿಣಾಮ ಹೆಚ್ಚಾಗಲಿದೆ.

ನದಿ ದಡದಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಚರಂಡಿ ನೀರು ನದಿಗೆ ಸೇರುವುದನ್ನು ತಡೆಗಟ್ಟಬೇಕು, ಕಾಫಿ ಪಲ್ಪಿಂಗ್ ಮಲೀನ ನೀರಿನ ನಿಯಂತ್ರಣಕ್ಕೆ ವಿಶೇಷ ಮೇಲ್ವಿಚಾರಣೆ ಅಗತ್ಯ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಜನಆಂದೋಲನಕ್ಕೆ ಮುಂದಾಗಬೇಕಾಗುತ್ತದೆ ಎಂದು ಸ್ಥಳೀಯ ಸಂಘಟನೆಗಳು ಎಚ್ಚರಿಕೆ ನೀಡಿದೆ.

” ಕಾವೇರಿ ನದಿಯ ನೀರು ಕಲುಷಿತಗೊಳಿಸುತ್ತಿರುವುದನ್ನು ತಡೆಗಟ್ಟಲು ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ನದಿ ತಟದಲ್ಲಿ ತ್ಯಾಜ್ಯ ಹಾಕುವ ಅಥವಾ ಕಲುಷಿತ ನೀರನ್ನು ಹರಿಸುವ ಜನರನ್ನು ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು.”

-ಎಂ.ಎನ್. ಚಂದ್ರಮೋಹನ್, ಸಂಚಾಲಕರು: ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ

“ಪುಣ್ಯನದಿ ಕಾವೇರಿ ತವರಿನಲ್ಲೇ ಕಣ್ಣೀರಿಡುತ್ತಿದ್ದಾಳೆ. ಸಿದ್ದಾಪುರದಿಂದ ಮಡಿಕೇರಿಗೆ ಸಂಪರ್ಕಿಸುವ ಕಾವೇರಿ ಸೇತುವೆ ಬಳಿ ಕಸವನ್ನು ತಂದು ಸುರಿಯುತ್ತಿರುವುದರಿಂದ ಇಡೀ ವಾತಾವರಣ ಗಬ್ಬು ವಾಸನೆ ಬೀರುತ್ತಿದೆ. ಅಲ್ಲದೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾಜ್ಯ ನೀರನ್ನು ಚರಂಡಿ ಮೂಲಕ ನದಿಗೆ ಬಿಡಲಾಗುತ್ತಿದ್ದು, ಜಲಮೂಲವನ್ನು ಸಂರಕ್ಷಿಸಬೇಕಾದ ಆಡಳಿತ ವರ್ಗದ ಅಸಡ್ಡೆ ತೋರುತ್ತಿದೆ.”

-ಪ್ರಕಾಶ್ ಸಿ.ಕೆ.: ಸ್ಥಳಿಯ ನಿವಾಸಿ.

” ನದಿ ದಡವನ್ನು ಶುಚಿಗೊಳಿಸಿ ಹೂ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಸೂಕ್ತ ಸಹಕಾರ ನೀಡದೆ ಪಾಲನೆಯು ಮಾಡದೆ ನಿರ್ಲಕ್ಷದ ಪರಿಣಾಮ ಕಾವೇರಿ ನದಿ ದಡ ಪರಿಸರ ಕಲುಷಿತ ವಾತಾವರಣ ಕಂಡುಬರುತ್ತಿದೆ. ಈ ಸಂಬಂಧ ಸಂಬಂಧಪಟ್ಟವರಿಗೆ ಮನವಿ ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ.”

-ಶೌಕತ್ ಆಲಿ, ಡಾಮಿನೊಸ್ ಯುವಕ ಸಂಘ: ಸಿದ್ದಾಪುರ

” ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ಸ್ಥಳ ಗುರುತಿಸದಿರುವುದು ಸಮಸ್ಯೆಗೆ ಮೂಲ ಕಾರಣ. ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿಯನ್ನು ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸಬೇಕು.”

ಎಂ.ಎ.ಅಜೀಜ್: ಸಾಮಾಜಿಕ ಹೋರಾಟಗಾರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago