ಮಡಿಕೇರಿ: ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನೂತನವಾಗಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು.
ಶುಕ್ರವಾರ ವಿಧಾನ ಸೌಧದಲ್ಲಿರುವ ಪೊನ್ನಣ್ಣ ನವರ ಕಛೇರಿಗೆ ಆಗಮಿಸಿ ಆಡಳಿತಾತ್ಮಕ ಸಲಹೆ ಕೇಳಲು ಬಂದ ಸಬ್ ಇನ್ಸ್ಪೆಕ್ಟರ್ ಗಳಾಗಿ ಆಯ್ಕೆಯಾದವರಿಗೆ ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸರ್ಕಾರಿ ಅಧಿಕಾರಿ ಕೆಲಸ ಆರಂಭಿಸುವಾಗ ಜನರ ಸೇವೆ ಮಾಡುತ್ತೇನೆ ಎಂಬ ಸಂಕಲ್ಪತೊಟ್ಟು ವೃತ್ತಿ ಆರಂಭಿಸಬೇಕು.
ಸಾಮಾನ್ಯ ಜನರಿಗೆ ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎಂಬ ಜ್ಞಾನ ಪೂರ್ಣವಾಗಿ ಇರುವುದಿಲ್ಲ. ಹಾಗಾಗಿ ಅವರನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಜನಾನುರಾಗಿ ಅಧಿಕಾರಿ ಎಂದು ಗುರುತಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…