ಸೋಮವಾರಪೇಟೆ : ರಸ್ತೆ ಕಾಮಗಾರಿಗೆ ವೆಟ್ಮಿಕ್ಸ್ ಸಾಗಿಸುತ್ತಿದ್ದ ಟಿಪ್ಪರ್ವೊಂದು ಎದುರಿನಿಂದ ಬಂದ ಪಿಕ್ಅಪ್ಗೆ ಜಾಗ ಕಲ್ಪಿಸಲು ಹೋಗಿ ರಸ್ತೆ ಬದಿಯ ಗುಂಡಿಗೆ ಇಳಿದ ಘಟನೆ ಪಟ್ಟಣ ಸಮೀಪದ ಕೂಡುರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ.
ಪಟ್ಟಣದ ಆಲೇಕಟ್ಟೆಯಿಂದ ತೋಳೂರುಶೆಟ್ಟಳ್ಳಿ-ಇನಕನಹಳ್ಳಿಯವರೆಗೆ ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿಗೆ ಜ.೧೧ರಂದು ಚಾಲನೆ ನೀಡಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಇದೀಗ ಮಳೆ ಕಡಿಮೆಯಾಗಿದ್ದು, ಕಾಮಗಾರಿ ಮುಂದುವರಿದಿದೆ. ಈ ಕಾಮಗಾರಿಗೆ ವೆಟ್ಮಿಕ್ಸ್ ಸಾಗಿಸುವ ಟಿಪ್ಪರ್ ವಾಹನವು, ರಸ್ತೆ ಬದಿಯಿರುವ ಗುಂಡಿಗೆ ಸಿಲುಕಿಕೊಂಡು ಕೆಲಕಾಲ ಇತರ ವಾಹನಗಳ ಸಂಚಾರಕ್ಕೆ ಸಮಸ್ಯೆ ತಂದೊಡ್ಡಿತ್ತು.
ಈ ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿದ್ದು, ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚದ ಹಿನ್ನೆಲೆಯಲ್ಲಿ ಅವಘಡಗಳು ಸಂಭವಿಸುತ್ತಲೇ ಇವೆ. ರಸ್ತೆಯ ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಗಳು ಜರುಗುತ್ತಿವೆ. ಒಂದು ವೇಳೆ ಟಿಪ್ಪರ್ ಮಗುಚಿಕೊಂಡಿದ್ದರೆ ಅನಾಹುತ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಸ್ತೆ ದುರಸ್ತಿ ಕಾಮಗಾರಿಗೂ ಮುನ್ನ ಇರುವ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಇಂನಿಜಿಯರ್ ಕ್ರಮ ವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…