ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ನಡೆದಿದೆ.
ಎಚ್.ಟಿ.ಸುನಿಲ್ ಎಂಬುವವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಸಲಗವನ್ನು ಕಂಡ ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ಒಂಟಿಸಲಗ ಗ್ರಾಮದಲ್ಲಿ ಸಂಚರಿಸಿದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಡ್ರೋನ್ ಕ್ಯಾಮರಾ ಬಳಸಿ ಆನೆಯನ್ನು ಪತ್ತೆಹಚ್ಚಿ ಕಾಡಿಗೆ ಅಟ್ಟಿದ್ದಾರೆ.





