ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್ನಿಂದ ಮಾರ್ಗೊಳ್ಳಿ ಎಸ್ಟೇಟ್ ಮೂಲಕ ಕಾಡಾನೆಗಳನ್ನು ಕಾಡಿಗೆ ಓಡಿಸಿದ್ದಾರೆ.
ಸುಮಾರು 8 ಕಿಲೋ ಮೀಟರ್ ದೂರದಲ್ಲಿರುವ ಮಾಲ್ದಾರೆ ಅರಣ್ಯಕ್ಕೆ 32 ಆನೆಗಳ ಹಿಂಡನ್ನು ಪಟಾಕಿ ಸಿಡಿಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 32 ಆನೆಗಳು ಹಲವು ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಲ್ಲದೇ ಕಾರ್ಮಿಕರು ಹಾಗೂ ಬೆಳೆಗಾರರಿಗೆ ಆತಂಕವನ್ನು ಸೃಷ್ಟಿಸಿದ್ದವು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ ಬೆಳೆಗಾರರು, ಕಾಡಾನೆಗಳ ಹಾವಳಿಯನ್ನು ತಪ್ಪಿಸುವಂತೆ ಆಗ್ರಹಿಸಿದ್ದರು.
ಬೆಳೆಗಾರರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸತತ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಆನೆಗಳನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆನೆಗಳು ಕಾಡಿಗೆ ಹೋದ ಬೆನ್ನಲ್ಲೇ ಕಾರ್ಮಿಕರು ಹಾಗೂ ಬೆಳೆಗಾರರು ತುಸು ನಿರಾಳರಾಗಿದ್ದು, ಬೆಳೆ ಕಟಾವಿಗೆ ಮುಂದಾಗಿದ್ದಾರೆ.
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…