A young man hanged himself
ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ.
ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು.
ವಿವಾಹಿತ ಮಹಿಳೆಯೊಂದಿಗೆ ಸಂಬಂಧವನ್ನಿಟ್ಟುಕೊಂಡಿದ್ದ ಸಾಗರ್, ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ಸುಮಾರು 8 ವರ್ಷಗಳಿಂದ ಜೀವನ ನಡೆಸುತ್ತಿದ್ದನು.
ಎರಡು ದಿನಗಳಿಂದ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಬೆಳಿಗ್ಗೆ ಹೊರಗಡೆ ತೆರಳಿದ್ದ ಸಾಗರ್, ಸಂಜೆ 6ರ ವೇಳೆಗೆ ಮತ್ತೆ ವಾಪಸ್ ಮನೆಗೆ ಬಂದಿದ್ದಾನೆ. ಈ ವೇಳೆ ಮಹಿಳೆ ಮನೆಯಲ್ಲಿ ಇಲ್ಲದಿರುವುದನ್ನು ನೋಡಿ ವಿಡಿಯೋ ಚಿತ್ರಣ ಮಾಡಿ ಅಡುಗೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತನ ತಾಯಿ ಎನ್.ಎನ್.ಸರೋಜ ಅವರು ನೀಡಿರುವ ದೂರಿನ ಅನ್ವಯ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತರ ಶರೀರವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…