A young man hanged himself
ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ.
ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು.
ವಿವಾಹಿತ ಮಹಿಳೆಯೊಂದಿಗೆ ಸಂಬಂಧವನ್ನಿಟ್ಟುಕೊಂಡಿದ್ದ ಸಾಗರ್, ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ಸುಮಾರು 8 ವರ್ಷಗಳಿಂದ ಜೀವನ ನಡೆಸುತ್ತಿದ್ದನು.
ಎರಡು ದಿನಗಳಿಂದ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಬೆಳಿಗ್ಗೆ ಹೊರಗಡೆ ತೆರಳಿದ್ದ ಸಾಗರ್, ಸಂಜೆ 6ರ ವೇಳೆಗೆ ಮತ್ತೆ ವಾಪಸ್ ಮನೆಗೆ ಬಂದಿದ್ದಾನೆ. ಈ ವೇಳೆ ಮಹಿಳೆ ಮನೆಯಲ್ಲಿ ಇಲ್ಲದಿರುವುದನ್ನು ನೋಡಿ ವಿಡಿಯೋ ಚಿತ್ರಣ ಮಾಡಿ ಅಡುಗೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೃತನ ತಾಯಿ ಎನ್.ಎನ್.ಸರೋಜ ಅವರು ನೀಡಿರುವ ದೂರಿನ ಅನ್ವಯ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತರ ಶರೀರವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…