ಕೊಡಗು

ಮನನೊಂದು ಯುವಕ ನೇಣಿಗೆ ಶರಣು

ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ.

ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು.

ವಿವಾಹಿತ ಮಹಿಳೆಯೊಂದಿಗೆ ಸಂಬಂಧವನ್ನಿಟ್ಟುಕೊಂಡಿದ್ದ ಸಾಗರ್, ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ಸುಮಾರು 8 ವರ್ಷಗಳಿಂದ ಜೀವನ ನಡೆಸುತ್ತಿದ್ದನು.

ಎರಡು ದಿನಗಳಿಂದ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಬೆಳಿಗ್ಗೆ ಹೊರಗಡೆ ತೆರಳಿದ್ದ ಸಾಗರ್, ಸಂಜೆ 6ರ ವೇಳೆಗೆ ಮತ್ತೆ ವಾಪಸ್ ಮನೆಗೆ ಬಂದಿದ್ದಾನೆ. ಈ ವೇಳೆ ಮಹಿಳೆ ಮನೆಯಲ್ಲಿ ಇಲ್ಲದಿರುವುದನ್ನು ನೋಡಿ ವಿಡಿಯೋ ಚಿತ್ರಣ ಮಾಡಿ ಅಡುಗೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಮೃತನ ತಾಯಿ ಎನ್.ಎನ್.ಸರೋಜ ಅವರು ನೀಡಿರುವ ದೂರಿನ ಅನ್ವಯ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತರ ಶರೀರವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

17 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

17 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

17 hours ago