ಕೊಡಗು

ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ ರಾಜ್ಯದ ೯ ವಿವಿಗಳನ್ನು ಮುಚ್ಚುವ ನಿರ್ಧಾರ ಖಂಡನೀಯ. ಹೆಚ್ಚಿನ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗದೆ ಜಿಲ್ಲೆಯಲ್ಲೆ ವಿದ್ಯಾಭ್ಯಾಸ ಮಾಡುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ಅನೇಕ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದರೆ ವಿವಿಗಳನ್ನು ಮುಚ್ಚುವ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವ ದುಸ್ಥಿತಿ ಒದಗಿ ಬರುತ್ತಿರಲಿಲ್ಲ. ಈಗಲಾದರು ಸರ್ಕಾರ ಎಚ್ಚೆತ್ತುಕೊಂಡು ಜನಸಾಮಾನ್ಯರಿಗೆ ಹೊರೆಯಾಗದಂತೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯಂತಹ ವಲಯಗಳ ಕಡೆ ಒಲವು ತೋರಿ ಈ ಬಾರಿಯ ಬಜೆಟ್ ಮಂಡಿಸಬೇಕು ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ತುತ್ತಾಗಿದ್ದು, ಒಂದು ರೂಪಾಯಿಯ ಗ್ಯಾರಂಟಿ ನೀಡಿ ನಾಲ್ಕು ರೂಪಾಯಿ ವಸೂಲಿ ಮಾಡುತ್ತಿದೆ.

ಆಸ್ತಿ ನೋಂದಣಿ ಶುಲ್ಕ, ಆಸ್ತಿ ಮಾರ್ಗದರ್ಶನ ಮೌಲ್ಯಗಳು, ವಾಹನ ನೋಂದಣಿ ಶುಲ್ಕ, ಆಸ್ಪತ್ರೆ ಸೇವಾ ಶುಲ್ಕಗಳು, ಸರ್ಕಾರಿ ಕಾಲೇಜು ಶುಲ್ಕಗಳು, ಬೆಂಗಳೂರು ಮೆಟ್ರೋ ದರ, ಎಲೆಕ್ಟ್ರಿಕ್‌ ವಾಹನ ತೆರಿಗೆ, ವಿದ್ಯುತ್ ದರ, ನೀರಿನ ಸುಂಕ, ಆಸ್ತಿ ತೆರಿಗೆ, ಬಿತ್ತನೆ ಬೀಜಗಳ ದರ, ಬಿಯರ್ ದರ, ಹಾಲಿನ ದರ, ಬಸ್ ಪ್ರಯಾಣ ದರ ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಸರ್ಕಾರ ದುಬಾರಿಗೊಳಿಸಿದೆ.

ಆರ್ಥಿಕವಾಗಿ ಕುಗ್ಗಿ ಹೋಗಿರುವ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ನಿರತಂತರವಾಗಿ ಏರಿಸುತ್ತಲೇ ಬರುತ್ತಿದ್ದು, ಜನರ ಹಿತದೃಷ್ಟಿಯಿಂದ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

51 mins ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

53 mins ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

56 mins ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

2 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago