ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ ರಾಜ್ಯದ ೯ ವಿವಿಗಳನ್ನು ಮುಚ್ಚುವ ನಿರ್ಧಾರ ಖಂಡನೀಯ. ಹೆಚ್ಚಿನ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗದೆ ಜಿಲ್ಲೆಯಲ್ಲೆ ವಿದ್ಯಾಭ್ಯಾಸ ಮಾಡುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ಅನೇಕ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದರೆ ವಿವಿಗಳನ್ನು ಮುಚ್ಚುವ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವ ದುಸ್ಥಿತಿ ಒದಗಿ ಬರುತ್ತಿರಲಿಲ್ಲ. ಈಗಲಾದರು ಸರ್ಕಾರ ಎಚ್ಚೆತ್ತುಕೊಂಡು ಜನಸಾಮಾನ್ಯರಿಗೆ ಹೊರೆಯಾಗದಂತೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯಂತಹ ವಲಯಗಳ ಕಡೆ ಒಲವು ತೋರಿ ಈ ಬಾರಿಯ ಬಜೆಟ್ ಮಂಡಿಸಬೇಕು ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ತುತ್ತಾಗಿದ್ದು, ಒಂದು ರೂಪಾಯಿಯ ಗ್ಯಾರಂಟಿ ನೀಡಿ ನಾಲ್ಕು ರೂಪಾಯಿ ವಸೂಲಿ ಮಾಡುತ್ತಿದೆ.
ಆಸ್ತಿ ನೋಂದಣಿ ಶುಲ್ಕ, ಆಸ್ತಿ ಮಾರ್ಗದರ್ಶನ ಮೌಲ್ಯಗಳು, ವಾಹನ ನೋಂದಣಿ ಶುಲ್ಕ, ಆಸ್ಪತ್ರೆ ಸೇವಾ ಶುಲ್ಕಗಳು, ಸರ್ಕಾರಿ ಕಾಲೇಜು ಶುಲ್ಕಗಳು, ಬೆಂಗಳೂರು ಮೆಟ್ರೋ ದರ, ಎಲೆಕ್ಟ್ರಿಕ್ ವಾಹನ ತೆರಿಗೆ, ವಿದ್ಯುತ್ ದರ, ನೀರಿನ ಸುಂಕ, ಆಸ್ತಿ ತೆರಿಗೆ, ಬಿತ್ತನೆ ಬೀಜಗಳ ದರ, ಬಿಯರ್ ದರ, ಹಾಲಿನ ದರ, ಬಸ್ ಪ್ರಯಾಣ ದರ ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಸರ್ಕಾರ ದುಬಾರಿಗೊಳಿಸಿದೆ.
ಆರ್ಥಿಕವಾಗಿ ಕುಗ್ಗಿ ಹೋಗಿರುವ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ನಿರತಂತರವಾಗಿ ಏರಿಸುತ್ತಲೇ ಬರುತ್ತಿದ್ದು, ಜನರ ಹಿತದೃಷ್ಟಿಯಿಂದ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…