ಕೊಡಗು

ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ ರಾಜ್ಯದ ೯ ವಿವಿಗಳನ್ನು ಮುಚ್ಚುವ ನಿರ್ಧಾರ ಖಂಡನೀಯ. ಹೆಚ್ಚಿನ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗದೆ ಜಿಲ್ಲೆಯಲ್ಲೆ ವಿದ್ಯಾಭ್ಯಾಸ ಮಾಡುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಕನಸು ನುಚ್ಚುನೂರಾಗಿದೆ. ಅನೇಕ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದರೆ ವಿವಿಗಳನ್ನು ಮುಚ್ಚುವ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕುವ ದುಸ್ಥಿತಿ ಒದಗಿ ಬರುತ್ತಿರಲಿಲ್ಲ. ಈಗಲಾದರು ಸರ್ಕಾರ ಎಚ್ಚೆತ್ತುಕೊಂಡು ಜನಸಾಮಾನ್ಯರಿಗೆ ಹೊರೆಯಾಗದಂತೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯಂತಹ ವಲಯಗಳ ಕಡೆ ಒಲವು ತೋರಿ ಈ ಬಾರಿಯ ಬಜೆಟ್ ಮಂಡಿಸಬೇಕು ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನಕ್ಕೆ ತುತ್ತಾಗಿದ್ದು, ಒಂದು ರೂಪಾಯಿಯ ಗ್ಯಾರಂಟಿ ನೀಡಿ ನಾಲ್ಕು ರೂಪಾಯಿ ವಸೂಲಿ ಮಾಡುತ್ತಿದೆ.

ಆಸ್ತಿ ನೋಂದಣಿ ಶುಲ್ಕ, ಆಸ್ತಿ ಮಾರ್ಗದರ್ಶನ ಮೌಲ್ಯಗಳು, ವಾಹನ ನೋಂದಣಿ ಶುಲ್ಕ, ಆಸ್ಪತ್ರೆ ಸೇವಾ ಶುಲ್ಕಗಳು, ಸರ್ಕಾರಿ ಕಾಲೇಜು ಶುಲ್ಕಗಳು, ಬೆಂಗಳೂರು ಮೆಟ್ರೋ ದರ, ಎಲೆಕ್ಟ್ರಿಕ್‌ ವಾಹನ ತೆರಿಗೆ, ವಿದ್ಯುತ್ ದರ, ನೀರಿನ ಸುಂಕ, ಆಸ್ತಿ ತೆರಿಗೆ, ಬಿತ್ತನೆ ಬೀಜಗಳ ದರ, ಬಿಯರ್ ದರ, ಹಾಲಿನ ದರ, ಬಸ್ ಪ್ರಯಾಣ ದರ ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಸರ್ಕಾರ ದುಬಾರಿಗೊಳಿಸಿದೆ.

ಆರ್ಥಿಕವಾಗಿ ಕುಗ್ಗಿ ಹೋಗಿರುವ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ನಿರತಂತರವಾಗಿ ಏರಿಸುತ್ತಲೇ ಬರುತ್ತಿದ್ದು, ಜನರ ಹಿತದೃಷ್ಟಿಯಿಂದ ತಕ್ಷಣ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

40 mins ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago