ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್ಬೆಟ್ಟ ಜಂಕ್ಷನ್ನಲ್ಲಿ ಭಾನುವಾರ ನಡೆದಿದೆ.
ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಿನಿ ಬಸ್ ಉರುಳಿ ಬಿದ್ದಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಚಾಲಕ ಮಂಜು, ಮೈಸೂರಿನ ಉಮೇಶ್, ರಂಜಿತಾ, ರೂಪಾ, ಜ್ಯೋತಿ, ಹರ್ಷಿತ, ಸಿಂಚನ, ರಶ್ಮಿ, ಚಿರಾಗ್, ಪ್ರಶಾಂತ್, ಗಾಯತ್ರಿ, ರಾಘವೇಂದ್ರಸ್ವಾಮಿ, ಉತ್ತಮ್, ಶಶಿಕುಮಾರ್, ಭವನ್, ನಿಶ್ಚಲ, ರಶ್ಮಿ, ಇಲವಾಲದ ಪ್ರಿಯಾ, ಯಶೋಧ, ಹುಣಸೂರಿನ ಭುವನೇಶ್ವರಿ, ಕಡಕೊಳದ ಚಂದನ್ ಗಾಯಗೊಂಡವರು.
ಮೈಸೂರಿನಿಂದ ಮಡಿಕೇರಿಗೆ ವಿವಾಹ ವಿಚಾರದ ಮಾತುಕತೆಗಾಗಿ ಸುಮಾರು 25 ಮಂದಿ ಇದ್ದ ಮಿನಿ ಬಸ್ ತೆರಳುತ್ತಿತ್ತು. ಈ ವೇಳೆ ಕಲ್ ಬೆಟ್ಟ ಜಂಕ್ಷನ್ ಬಳಿ ವಿರಾಜಪೇಟೆ ರಸ್ತೆ ಕಡೆಯಿಂದ ಬಂದ ಲಾರಿ ಮತ್ತು ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಉರುಳಿ ಬಿದ್ದಿದೆ. ಈ ನಡುವೆ ಪಿರಿಯಾಪಟ್ಟಣ ಕಡೆಯಿಂದ ಬರುತ್ತಿದ್ದ ಸುಳ್ಯ ಮೂಲದ ಕಾರು ಕೂಡ ಲಾರಿಗೆ ಡಿಕ್ಕಿಯಾಗಿದೆ. ಕಾರು ಜಖಂಗೊಂಡಿದ್ದು, ಕಾರ್ ಏರ್ ಬ್ಯಾಗ್ ಇದ್ದ ಕಾರಣ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಣುಸೂರು ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…