ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್ಬೆಟ್ಟ ಜಂಕ್ಷನ್ನಲ್ಲಿ ಭಾನುವಾರ ನಡೆದಿದೆ.
ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಿನಿ ಬಸ್ ಉರುಳಿ ಬಿದ್ದಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಚಾಲಕ ಮಂಜು, ಮೈಸೂರಿನ ಉಮೇಶ್, ರಂಜಿತಾ, ರೂಪಾ, ಜ್ಯೋತಿ, ಹರ್ಷಿತ, ಸಿಂಚನ, ರಶ್ಮಿ, ಚಿರಾಗ್, ಪ್ರಶಾಂತ್, ಗಾಯತ್ರಿ, ರಾಘವೇಂದ್ರಸ್ವಾಮಿ, ಉತ್ತಮ್, ಶಶಿಕುಮಾರ್, ಭವನ್, ನಿಶ್ಚಲ, ರಶ್ಮಿ, ಇಲವಾಲದ ಪ್ರಿಯಾ, ಯಶೋಧ, ಹುಣಸೂರಿನ ಭುವನೇಶ್ವರಿ, ಕಡಕೊಳದ ಚಂದನ್ ಗಾಯಗೊಂಡವರು.
ಮೈಸೂರಿನಿಂದ ಮಡಿಕೇರಿಗೆ ವಿವಾಹ ವಿಚಾರದ ಮಾತುಕತೆಗಾಗಿ ಸುಮಾರು 25 ಮಂದಿ ಇದ್ದ ಮಿನಿ ಬಸ್ ತೆರಳುತ್ತಿತ್ತು. ಈ ವೇಳೆ ಕಲ್ ಬೆಟ್ಟ ಜಂಕ್ಷನ್ ಬಳಿ ವಿರಾಜಪೇಟೆ ರಸ್ತೆ ಕಡೆಯಿಂದ ಬಂದ ಲಾರಿ ಮತ್ತು ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಉರುಳಿ ಬಿದ್ದಿದೆ. ಈ ನಡುವೆ ಪಿರಿಯಾಪಟ್ಟಣ ಕಡೆಯಿಂದ ಬರುತ್ತಿದ್ದ ಸುಳ್ಯ ಮೂಲದ ಕಾರು ಕೂಡ ಲಾರಿಗೆ ಡಿಕ್ಕಿಯಾಗಿದೆ. ಕಾರು ಜಖಂಗೊಂಡಿದ್ದು, ಕಾರ್ ಏರ್ ಬ್ಯಾಗ್ ಇದ್ದ ಕಾರಣ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಣುಸೂರು ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…