ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ.
ಸ್ಥಳೀಯ ಆಶಾ ಕಾರ್ಯಕರ್ತೆ ಗೀತಾ ತಮ್ಮ ಸ್ಕೂಟಿಯಲ್ಲಿ ಆಶಾ ಕಾರ್ಯಕರ್ತೆ ರಮ್ಯ ಅವರ ಜೊತೆ ಚೈಯಂಡಾಣೆಯಲ್ಲಿ ಸಂಘಕ್ಕೆ ಸಂಬಂಧಿಸಿದ ಸಭೆ ಮುಗಿಸಿ ನಾಪೋಕ್ಲುವಿಗೆ ಹಿಂತಿರುಗುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಗೀತಾ ಚಲಾಯಿಸುತ್ತಿದ್ದ ಸ್ಕೂಟಿ ಚೈಯಂಡಾಣೆಯ ನರಿಯಂದಡ ಗ್ರಾಮದ ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಆಕಸ್ಮಿಕವಾಗಿ ಸ್ಕೂಟಿಯಲ್ಲಿ ಹೋಗೆ ಕಾಣಿಸಿಕೊಂಡಿದೆ.
ಕೂಡಲೇ ಸ್ಕೂಟಿಯನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಕಾರಣ ಯಾವುದೇ ಜೀವ ಅಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಯಾವುದೇ ಪ್ರಯೋಜನವಾಗದೆ ನೋಡನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಸ್ಕೂಟಿ ಸಂಪೂರ್ಣ ಸುಟ್ಟು ಕರಕಲಾಗಿ ಬಾರಿ ನಷ್ಟ ಸಂಭವಿಸಿದೆ.
ಈ ಬಗ್ಗೆ ಗೀತಾ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಸ್ಥಳವನ್ನು ಪರಿಶೀಲಿಸಿ ಕಾನೂನಿನ ಕ್ರಮ ಕೈಗೊಂಡಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು…