ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ.
ಸ್ಥಳೀಯ ಆಶಾ ಕಾರ್ಯಕರ್ತೆ ಗೀತಾ ತಮ್ಮ ಸ್ಕೂಟಿಯಲ್ಲಿ ಆಶಾ ಕಾರ್ಯಕರ್ತೆ ರಮ್ಯ ಅವರ ಜೊತೆ ಚೈಯಂಡಾಣೆಯಲ್ಲಿ ಸಂಘಕ್ಕೆ ಸಂಬಂಧಿಸಿದ ಸಭೆ ಮುಗಿಸಿ ನಾಪೋಕ್ಲುವಿಗೆ ಹಿಂತಿರುಗುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಗೀತಾ ಚಲಾಯಿಸುತ್ತಿದ್ದ ಸ್ಕೂಟಿ ಚೈಯಂಡಾಣೆಯ ನರಿಯಂದಡ ಗ್ರಾಮದ ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಆಕಸ್ಮಿಕವಾಗಿ ಸ್ಕೂಟಿಯಲ್ಲಿ ಹೋಗೆ ಕಾಣಿಸಿಕೊಂಡಿದೆ.
ಕೂಡಲೇ ಸ್ಕೂಟಿಯನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಕಾರಣ ಯಾವುದೇ ಜೀವ ಅಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಯಾವುದೇ ಪ್ರಯೋಜನವಾಗದೆ ನೋಡನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಸ್ಕೂಟಿ ಸಂಪೂರ್ಣ ಸುಟ್ಟು ಕರಕಲಾಗಿ ಬಾರಿ ನಷ್ಟ ಸಂಭವಿಸಿದೆ.
ಈ ಬಗ್ಗೆ ಗೀತಾ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಸ್ಥಳವನ್ನು ಪರಿಶೀಲಿಸಿ ಕಾನೂನಿನ ಕ್ರಮ ಕೈಗೊಂಡಿದ್ದಾರೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…