ಕೊಡಗು

ನಕಲಿ ಔಷಧಿ ನೀಡಿ ವಂಚಿಸಿದ ಆರೋಪ : ಆರೋಪಿಗಳಿಗೆ ಶಿಕ್ಷೆ

ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ ಓಣಿಕೇರಿ ಶಿಕ್ಷೆಗೆ ಒಳಗಾದವರು.

2019 ರಲ್ಲಿ ಮಡಿಕೇರಿಯ ದೇಚೂರಿನಲ್ಲಿ ಸಿ.ಡಿ.ಸರೋಜ ಹಾಗೂ ಸಿ.ಡಿ.ಕಾಳಪ್ಪ ಮನೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿ ರಮೇಶ ಗೋವಿಂದಪ್ಪ ಗೊಲ್ಲರ್ ಎಂಬವರು ಆಗಮಿಸಿದ್ದರು. ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿರುವ ಸರೋಜರವರ ಗಂಡನನ್ನು ನೋಡಿ, ತನ್ನ ತಾಯಿಗೂ ಕೂಡ ಇದೇ ರೀತಿಯ ಖಾಯಿಲೆ ಇದ್ದು, ಆಯುರ್ವೇದ ಔಷಧ ನೀಡಿದ ನಂತರ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಔಷಧಿಯು ಕುಶಾಲನಗರದ ಆಯುರ್ವೇದಿಕ್ ಅಂಗಡಿಯಲ್ಲಿ ಮಾತ್ರ ದೊರೆಯುವುದಾಗಿ ನಂಬಿಸಿ, ಸಿ.ಡಿ.ಸರೋಜ ಮತ್ತು ಕಾಳಪ್ಪ ಅವರನ್ನು ಕುಶಾಲನಗರದ ಆಯುರ್ವೇದಿಕ್ ಔಷಧ ಅಂಗಡಿಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಮತ್ತೊಬ್ಬ ಆರೋಪಿ ಭರತ್‌ನನ್ನು ಭೇಟಿ ಮಾಡಿಸಿ ಈ ಔಷಧಿಗೆ ಒಟ್ಟು 8,76,000 ರೂ.ಗಳಾಗುವುದೆಂದು ಹೇಳಿದ್ದಾರೆ. ಬಳಿಕ ಸಿ.ಡಿ.ಸರೋಜರವರ ಬ್ಯಾಂಕ್ ಖಾತೆಗಳಿಂದ ಮತ್ತೊಬ್ಬ ಆರೋಪಿ ರವಿ ಓಣಿಕೇರಿ ಎಂಬ ವ್ಯಕ್ತಿಯ ಹೆಸರಿಗೆ ಒಟ್ಟು 8,76,000 ರೂ.ಗಳನ್ನು 2 ಚೆಕ್‌ಗಳ ಮೂಲಕ ಪಡೆದುಕೊಂಡಿದ್ದರು. ಬಳಿಕ ಮೋಸ ಹೋಗಿರುವುದು ತಿಳಿದು ಈ ಸಂಬಂಧ ದಂಪತಿಗಳು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಅಂದಿನ ಪೊಲೀಸ್ ಉಪ ನಿರೀಕ್ಷಕರಾದ ಎಂ.ಟಿ.ಅಂತಿಮ ತನಿಖೆ ನಡೆಸಿ ಆರೋಪಿತರ ವಿರುದ್ಧ ಮೋಸ, ವಂಚನೆಯ ಅಪರಾಧಕ್ಕಾಗಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸಿ.ಜೆ.ಎಂ. ನ್ಯಾಯಾಲಯ, ಮಡಿಕೇರಿ ಇಲ್ಲಿ ನಡೆದಿದ್ದು, ಆರೋಪಿತರು ಮೋಸದಿಂದ ಸಿ.ಡಿ.ಸರೋಜರವರಿಗೆ ವಂಚಿಸಿ ಒಟ್ಟು 8,76,000 ರೂ.ಗಳನ್ನು ಲಪಟಾಯಿಸಿರುವುದು ನಿಸ್ಸಂಶಯವಾಗಿ ಸಾಬೀತಾಗಿದೆ ಎಂದು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ಸಿ.ವೀರಭದ್ರಯ್ಯ ತೀರ್ಪು ನೀಡಿದ್ದಾರೆ.

ಆರೋಪಿಗಳಿಗೆ ದಂಡ
ಆರೋಪಿತರಿಗೆ ಕಲಂ ೪17ರ ಪ್ರಕಾರ ಅಪರಾಧಕ್ಕಾಗಿ 1 ವರ್ಷ ಸಜೆ ಹಾಗೂ ರೂ.10,000 ದಂಡ. ಕಲಂ420 ಭಾ.ದಂ.ಸಂ.ರ ಅಪರಾಧಕ್ಕಾಗಿ 2 ವರ್ಷಗಳ ಸಜೆ ಹಾಗೂ ರೂ. 10,000 ದಂಡ, ಕಲಂ:19 ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷ್ ಮೆಂಟ್ ಆಕ್ಟ್‌ನ ಅಪರಾಧಕ್ಕಾಗಿ 2 ವರ್ಷಗಳ ಸಜೆ, ರೂ.10,000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಿ.ಎಸ್. ಸಂತೋಷ್ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

7 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

9 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

9 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

9 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

10 hours ago