Accused Sentenced for Fraud Involving Fake Medicines
ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ ಓಣಿಕೇರಿ ಶಿಕ್ಷೆಗೆ ಒಳಗಾದವರು.
2019 ರಲ್ಲಿ ಮಡಿಕೇರಿಯ ದೇಚೂರಿನಲ್ಲಿ ಸಿ.ಡಿ.ಸರೋಜ ಹಾಗೂ ಸಿ.ಡಿ.ಕಾಳಪ್ಪ ಮನೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿ ರಮೇಶ ಗೋವಿಂದಪ್ಪ ಗೊಲ್ಲರ್ ಎಂಬವರು ಆಗಮಿಸಿದ್ದರು. ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿರುವ ಸರೋಜರವರ ಗಂಡನನ್ನು ನೋಡಿ, ತನ್ನ ತಾಯಿಗೂ ಕೂಡ ಇದೇ ರೀತಿಯ ಖಾಯಿಲೆ ಇದ್ದು, ಆಯುರ್ವೇದ ಔಷಧ ನೀಡಿದ ನಂತರ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಔಷಧಿಯು ಕುಶಾಲನಗರದ ಆಯುರ್ವೇದಿಕ್ ಅಂಗಡಿಯಲ್ಲಿ ಮಾತ್ರ ದೊರೆಯುವುದಾಗಿ ನಂಬಿಸಿ, ಸಿ.ಡಿ.ಸರೋಜ ಮತ್ತು ಕಾಳಪ್ಪ ಅವರನ್ನು ಕುಶಾಲನಗರದ ಆಯುರ್ವೇದಿಕ್ ಔಷಧ ಅಂಗಡಿಗೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ಮತ್ತೊಬ್ಬ ಆರೋಪಿ ಭರತ್ನನ್ನು ಭೇಟಿ ಮಾಡಿಸಿ ಈ ಔಷಧಿಗೆ ಒಟ್ಟು 8,76,000 ರೂ.ಗಳಾಗುವುದೆಂದು ಹೇಳಿದ್ದಾರೆ. ಬಳಿಕ ಸಿ.ಡಿ.ಸರೋಜರವರ ಬ್ಯಾಂಕ್ ಖಾತೆಗಳಿಂದ ಮತ್ತೊಬ್ಬ ಆರೋಪಿ ರವಿ ಓಣಿಕೇರಿ ಎಂಬ ವ್ಯಕ್ತಿಯ ಹೆಸರಿಗೆ ಒಟ್ಟು 8,76,000 ರೂ.ಗಳನ್ನು 2 ಚೆಕ್ಗಳ ಮೂಲಕ ಪಡೆದುಕೊಂಡಿದ್ದರು. ಬಳಿಕ ಮೋಸ ಹೋಗಿರುವುದು ತಿಳಿದು ಈ ಸಂಬಂಧ ದಂಪತಿಗಳು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಅಂದಿನ ಪೊಲೀಸ್ ಉಪ ನಿರೀಕ್ಷಕರಾದ ಎಂ.ಟಿ.ಅಂತಿಮ ತನಿಖೆ ನಡೆಸಿ ಆರೋಪಿತರ ವಿರುದ್ಧ ಮೋಸ, ವಂಚನೆಯ ಅಪರಾಧಕ್ಕಾಗಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸಿ.ಜೆ.ಎಂ. ನ್ಯಾಯಾಲಯ, ಮಡಿಕೇರಿ ಇಲ್ಲಿ ನಡೆದಿದ್ದು, ಆರೋಪಿತರು ಮೋಸದಿಂದ ಸಿ.ಡಿ.ಸರೋಜರವರಿಗೆ ವಂಚಿಸಿ ಒಟ್ಟು 8,76,000 ರೂ.ಗಳನ್ನು ಲಪಟಾಯಿಸಿರುವುದು ನಿಸ್ಸಂಶಯವಾಗಿ ಸಾಬೀತಾಗಿದೆ ಎಂದು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ಸಿ.ವೀರಭದ್ರಯ್ಯ ತೀರ್ಪು ನೀಡಿದ್ದಾರೆ.
ಆರೋಪಿಗಳಿಗೆ ದಂಡ
ಆರೋಪಿತರಿಗೆ ಕಲಂ ೪17ರ ಪ್ರಕಾರ ಅಪರಾಧಕ್ಕಾಗಿ 1 ವರ್ಷ ಸಜೆ ಹಾಗೂ ರೂ.10,000 ದಂಡ. ಕಲಂ420 ಭಾ.ದಂ.ಸಂ.ರ ಅಪರಾಧಕ್ಕಾಗಿ 2 ವರ್ಷಗಳ ಸಜೆ ಹಾಗೂ ರೂ. 10,000 ದಂಡ, ಕಲಂ:19 ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷ್ ಮೆಂಟ್ ಆಕ್ಟ್ನ ಅಪರಾಧಕ್ಕಾಗಿ 2 ವರ್ಷಗಳ ಸಜೆ, ರೂ.10,000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಿ.ಎಸ್. ಸಂತೋಷ್ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…