ಕೊಡಗು

ನಕಲಿ ಔಷಧಿ ನೀಡಿ ವಂಚಿಸಿದ ಆರೋಪ : ಆರೋಪಿಗಳಿಗೆ ಶಿಕ್ಷೆ

ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ ಓಣಿಕೇರಿ ಶಿಕ್ಷೆಗೆ ಒಳಗಾದವರು.

2019 ರಲ್ಲಿ ಮಡಿಕೇರಿಯ ದೇಚೂರಿನಲ್ಲಿ ಸಿ.ಡಿ.ಸರೋಜ ಹಾಗೂ ಸಿ.ಡಿ.ಕಾಳಪ್ಪ ಮನೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿ ರಮೇಶ ಗೋವಿಂದಪ್ಪ ಗೊಲ್ಲರ್ ಎಂಬವರು ಆಗಮಿಸಿದ್ದರು. ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿರುವ ಸರೋಜರವರ ಗಂಡನನ್ನು ನೋಡಿ, ತನ್ನ ತಾಯಿಗೂ ಕೂಡ ಇದೇ ರೀತಿಯ ಖಾಯಿಲೆ ಇದ್ದು, ಆಯುರ್ವೇದ ಔಷಧ ನೀಡಿದ ನಂತರ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಔಷಧಿಯು ಕುಶಾಲನಗರದ ಆಯುರ್ವೇದಿಕ್ ಅಂಗಡಿಯಲ್ಲಿ ಮಾತ್ರ ದೊರೆಯುವುದಾಗಿ ನಂಬಿಸಿ, ಸಿ.ಡಿ.ಸರೋಜ ಮತ್ತು ಕಾಳಪ್ಪ ಅವರನ್ನು ಕುಶಾಲನಗರದ ಆಯುರ್ವೇದಿಕ್ ಔಷಧ ಅಂಗಡಿಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಮತ್ತೊಬ್ಬ ಆರೋಪಿ ಭರತ್‌ನನ್ನು ಭೇಟಿ ಮಾಡಿಸಿ ಈ ಔಷಧಿಗೆ ಒಟ್ಟು 8,76,000 ರೂ.ಗಳಾಗುವುದೆಂದು ಹೇಳಿದ್ದಾರೆ. ಬಳಿಕ ಸಿ.ಡಿ.ಸರೋಜರವರ ಬ್ಯಾಂಕ್ ಖಾತೆಗಳಿಂದ ಮತ್ತೊಬ್ಬ ಆರೋಪಿ ರವಿ ಓಣಿಕೇರಿ ಎಂಬ ವ್ಯಕ್ತಿಯ ಹೆಸರಿಗೆ ಒಟ್ಟು 8,76,000 ರೂ.ಗಳನ್ನು 2 ಚೆಕ್‌ಗಳ ಮೂಲಕ ಪಡೆದುಕೊಂಡಿದ್ದರು. ಬಳಿಕ ಮೋಸ ಹೋಗಿರುವುದು ತಿಳಿದು ಈ ಸಂಬಂಧ ದಂಪತಿಗಳು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಅಂದಿನ ಪೊಲೀಸ್ ಉಪ ನಿರೀಕ್ಷಕರಾದ ಎಂ.ಟಿ.ಅಂತಿಮ ತನಿಖೆ ನಡೆಸಿ ಆರೋಪಿತರ ವಿರುದ್ಧ ಮೋಸ, ವಂಚನೆಯ ಅಪರಾಧಕ್ಕಾಗಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸಿ.ಜೆ.ಎಂ. ನ್ಯಾಯಾಲಯ, ಮಡಿಕೇರಿ ಇಲ್ಲಿ ನಡೆದಿದ್ದು, ಆರೋಪಿತರು ಮೋಸದಿಂದ ಸಿ.ಡಿ.ಸರೋಜರವರಿಗೆ ವಂಚಿಸಿ ಒಟ್ಟು 8,76,000 ರೂ.ಗಳನ್ನು ಲಪಟಾಯಿಸಿರುವುದು ನಿಸ್ಸಂಶಯವಾಗಿ ಸಾಬೀತಾಗಿದೆ ಎಂದು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ಸಿ.ವೀರಭದ್ರಯ್ಯ ತೀರ್ಪು ನೀಡಿದ್ದಾರೆ.

ಆರೋಪಿಗಳಿಗೆ ದಂಡ
ಆರೋಪಿತರಿಗೆ ಕಲಂ ೪17ರ ಪ್ರಕಾರ ಅಪರಾಧಕ್ಕಾಗಿ 1 ವರ್ಷ ಸಜೆ ಹಾಗೂ ರೂ.10,000 ದಂಡ. ಕಲಂ420 ಭಾ.ದಂ.ಸಂ.ರ ಅಪರಾಧಕ್ಕಾಗಿ 2 ವರ್ಷಗಳ ಸಜೆ ಹಾಗೂ ರೂ. 10,000 ದಂಡ, ಕಲಂ:19 ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷ್ ಮೆಂಟ್ ಆಕ್ಟ್‌ನ ಅಪರಾಧಕ್ಕಾಗಿ 2 ವರ್ಷಗಳ ಸಜೆ, ರೂ.10,000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಿ.ಎಸ್. ಸಂತೋಷ್ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

10 mins ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

14 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

15 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

15 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

16 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

17 hours ago