ಕೊಡಗು

ನಕಲಿ ಔಷಧಿ ನೀಡಿ ವಂಚಿಸಿದ ಆರೋಪ : ಆರೋಪಿಗಳಿಗೆ ಶಿಕ್ಷೆ

ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ ಓಣಿಕೇರಿ ಶಿಕ್ಷೆಗೆ ಒಳಗಾದವರು.

2019 ರಲ್ಲಿ ಮಡಿಕೇರಿಯ ದೇಚೂರಿನಲ್ಲಿ ಸಿ.ಡಿ.ಸರೋಜ ಹಾಗೂ ಸಿ.ಡಿ.ಕಾಳಪ್ಪ ಮನೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿ ರಮೇಶ ಗೋವಿಂದಪ್ಪ ಗೊಲ್ಲರ್ ಎಂಬವರು ಆಗಮಿಸಿದ್ದರು. ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿರುವ ಸರೋಜರವರ ಗಂಡನನ್ನು ನೋಡಿ, ತನ್ನ ತಾಯಿಗೂ ಕೂಡ ಇದೇ ರೀತಿಯ ಖಾಯಿಲೆ ಇದ್ದು, ಆಯುರ್ವೇದ ಔಷಧ ನೀಡಿದ ನಂತರ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಔಷಧಿಯು ಕುಶಾಲನಗರದ ಆಯುರ್ವೇದಿಕ್ ಅಂಗಡಿಯಲ್ಲಿ ಮಾತ್ರ ದೊರೆಯುವುದಾಗಿ ನಂಬಿಸಿ, ಸಿ.ಡಿ.ಸರೋಜ ಮತ್ತು ಕಾಳಪ್ಪ ಅವರನ್ನು ಕುಶಾಲನಗರದ ಆಯುರ್ವೇದಿಕ್ ಔಷಧ ಅಂಗಡಿಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಮತ್ತೊಬ್ಬ ಆರೋಪಿ ಭರತ್‌ನನ್ನು ಭೇಟಿ ಮಾಡಿಸಿ ಈ ಔಷಧಿಗೆ ಒಟ್ಟು 8,76,000 ರೂ.ಗಳಾಗುವುದೆಂದು ಹೇಳಿದ್ದಾರೆ. ಬಳಿಕ ಸಿ.ಡಿ.ಸರೋಜರವರ ಬ್ಯಾಂಕ್ ಖಾತೆಗಳಿಂದ ಮತ್ತೊಬ್ಬ ಆರೋಪಿ ರವಿ ಓಣಿಕೇರಿ ಎಂಬ ವ್ಯಕ್ತಿಯ ಹೆಸರಿಗೆ ಒಟ್ಟು 8,76,000 ರೂ.ಗಳನ್ನು 2 ಚೆಕ್‌ಗಳ ಮೂಲಕ ಪಡೆದುಕೊಂಡಿದ್ದರು. ಬಳಿಕ ಮೋಸ ಹೋಗಿರುವುದು ತಿಳಿದು ಈ ಸಂಬಂಧ ದಂಪತಿಗಳು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಅಂದಿನ ಪೊಲೀಸ್ ಉಪ ನಿರೀಕ್ಷಕರಾದ ಎಂ.ಟಿ.ಅಂತಿಮ ತನಿಖೆ ನಡೆಸಿ ಆರೋಪಿತರ ವಿರುದ್ಧ ಮೋಸ, ವಂಚನೆಯ ಅಪರಾಧಕ್ಕಾಗಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸಿ.ಜೆ.ಎಂ. ನ್ಯಾಯಾಲಯ, ಮಡಿಕೇರಿ ಇಲ್ಲಿ ನಡೆದಿದ್ದು, ಆರೋಪಿತರು ಮೋಸದಿಂದ ಸಿ.ಡಿ.ಸರೋಜರವರಿಗೆ ವಂಚಿಸಿ ಒಟ್ಟು 8,76,000 ರೂ.ಗಳನ್ನು ಲಪಟಾಯಿಸಿರುವುದು ನಿಸ್ಸಂಶಯವಾಗಿ ಸಾಬೀತಾಗಿದೆ ಎಂದು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ಸಿ.ವೀರಭದ್ರಯ್ಯ ತೀರ್ಪು ನೀಡಿದ್ದಾರೆ.

ಆರೋಪಿಗಳಿಗೆ ದಂಡ
ಆರೋಪಿತರಿಗೆ ಕಲಂ ೪17ರ ಪ್ರಕಾರ ಅಪರಾಧಕ್ಕಾಗಿ 1 ವರ್ಷ ಸಜೆ ಹಾಗೂ ರೂ.10,000 ದಂಡ. ಕಲಂ420 ಭಾ.ದಂ.ಸಂ.ರ ಅಪರಾಧಕ್ಕಾಗಿ 2 ವರ್ಷಗಳ ಸಜೆ ಹಾಗೂ ರೂ. 10,000 ದಂಡ, ಕಲಂ:19 ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷ್ ಮೆಂಟ್ ಆಕ್ಟ್‌ನ ಅಪರಾಧಕ್ಕಾಗಿ 2 ವರ್ಷಗಳ ಸಜೆ, ರೂ.10,000 ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಿ.ಎಸ್. ಸಂತೋಷ್ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

7 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago