ಕೊಡಗು

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿ.11ರಂದು ನ್ಯಾಯಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು ತೆರಳಿದ ಸಂದರ್ಭದಲ್ಲಿ ಅಂಗಡಿ ನಡೆಸುತ್ತಿರುವ, ಮಾಲ್ದಾರೆ ಗ್ರಾ.ಪಂ. ಮಾಜಿ ಅಧ್ಯಕ್ಷ, ರಜಾಕ್ (58) ಎಂಬಾತ ಬಾಲಕಿಯನ್ನು ಪೀಡಿಸಿ ಅಂಗಡಿಗೆ ಎಳೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ತಪ್ಪಿಸಿಕೊಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದ್ದು, ಬಳಿಕ ಬಾಲಕಿಯ ಪೋಷಕರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಿದ್ದಾರೆ. ಪೋಕ್ಸೋ ಸೇರಿದಂತೆ ವಿವಿಧ ಬಿಎನ್‌ಎಸ್ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ:-ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಆಂದೋಲನ ಡೆಸ್ಕ್

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

23 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

40 mins ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

53 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago