ಕೊಡಗು

ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ನೇಮಕ: ಸಚಿವ ಚೆಲುವರಾಯಸ್ವಾಮಿ

ಮಡಿಕೇರಿ : ನವೆಂಬರ್ ಅಂತ್ಯದೊಳಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಸಂದರ್ಭ ಶಾಸಕರಿಗೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುತ್ತದೆ. ಈಗಾಗಲೇ ವೇಣುಗೋಪಾಲ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಎರಡು ಮೂರು ಸುತ್ತು ಮಾತುಕತೆ ಆಗಿದೆ. ಪಕ್ಷ ಅಧಿಕಾರಕ್ಕೆ ಬಂದಾಗ ಅಧ್ಯಕ್ಷರಾಗಬೇಕು, ಶಾಸಕರಾಗಬೇಕು, ಮಂತ್ರಿ ಆಗಬೇಕೆಂಬ ಆಸೆ ಸಹಜ. ಪಕ್ಷಕ್ಕಾಗಿ ದುಡಿದವರಿಗೆ ಹಂತ ಹಂತವಾಗಿ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಚೆಲುವರಾಯಸ್ವಾಮಿ, ಅದನ್ನು ಹೈಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡುತ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ ಕಡೆ ಇರುತ್ತದೆ. ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದರು.

ಮುಸ್ಲಿಂ ಸಮುದಾಯದ ಮತದಿಂದ ಕಾಂಗ್ರೆಸ್ ಸರ್ಕಾರ ಬಂದಿದೆ ಎಂಬ ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಎಲ್ಲಾ ಕಮ್ಯುನಿಟಿಯವರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರು ಕೋಟಿ ಜನರಿಗೂ ಅಭಿನಂದನೆ ಸಲ್ಲಿಸಿದ್ದೇವೆ. ಅವರವರ ಕಮ್ಯುನಿಟಿ ಬಗ್ಗೆ ಅವರು ಹೇಳುವುದರಲ್ಲಿ ತಪ್ಪಿಲ್ಲ ಎಂದರು.

andolanait

Recent Posts

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

11 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

35 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

47 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

53 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

57 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

59 mins ago