ಕೊಡಗು

ಮಡಿಕೇರಿ| ನಿಧಿ ಆಸೆಗೆ ಮನೆಯ ಕೋಣೆ ಅಗೆದ ಐವರ ಬಂಧನ

ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯಲ್ಲಿ ನಿಧಿ ಇದೆ ಎಂದು ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್ ನ ಆತೀಕ್ ಎಂಬಾತನ ಬಳಿ ಹೇಳಿದ ಹಿನ್ನೆಲೆಯಲ್ಲಿ ಆತ ಕಾಸರಗೋಡು ನಿಂದ ಓರ್ವ ಉಸ್ತಾದ್ ನನ್ನು ಕರೆಸಿದ್ದಾನೆ. ಉಸ್ತಾದ್ ಪ್ರಾರ್ಥನೆ ಮಾಡಿದ ಸಂದರ್ಭದಲ್ಲಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಆವಾಗ ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ಅಲ್ಲಿಂದ ತೆರಳಿದ್ದಾರೆ.

ತದನಂತರ ಆಸೀಫ್ ಈ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆ, ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರತೊಡಗಿದವು.

ಈ ಮನೆಯಲ್ಲಿ ಅಕ್ರಮವಾಗಿ ನಿಧಿ ಶೋಧ ಕಾರ್ಯ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ.

ಈ ವೇಳೆ ಪೊಲೀಸರು ಆಸೀಫ್ ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

11 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

12 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

12 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

13 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

13 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

13 hours ago