ಕೊಡಗು

ಮಡಿಕೇರಿ| ನಿಧಿ ಆಸೆಗೆ ಮನೆಯ ಕೋಣೆ ಅಗೆದ ಐವರ ಬಂಧನ

ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯಲ್ಲಿ ನಿಧಿ ಇದೆ ಎಂದು ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್ ನ ಆತೀಕ್ ಎಂಬಾತನ ಬಳಿ ಹೇಳಿದ ಹಿನ್ನೆಲೆಯಲ್ಲಿ ಆತ ಕಾಸರಗೋಡು ನಿಂದ ಓರ್ವ ಉಸ್ತಾದ್ ನನ್ನು ಕರೆಸಿದ್ದಾನೆ. ಉಸ್ತಾದ್ ಪ್ರಾರ್ಥನೆ ಮಾಡಿದ ಸಂದರ್ಭದಲ್ಲಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಆವಾಗ ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ಅಲ್ಲಿಂದ ತೆರಳಿದ್ದಾರೆ.

ತದನಂತರ ಆಸೀಫ್ ಈ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆ, ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರತೊಡಗಿದವು.

ಈ ಮನೆಯಲ್ಲಿ ಅಕ್ರಮವಾಗಿ ನಿಧಿ ಶೋಧ ಕಾರ್ಯ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ.

ಈ ವೇಳೆ ಪೊಲೀಸರು ಆಸೀಫ್ ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago