ಕೊಡಗು

ಮಡಿಕೇರಿ| ನಿಧಿ ಆಸೆಗೆ ಮನೆಯ ಕೋಣೆ ಅಗೆದ ಐವರ ಬಂಧನ

ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ ಮನೆಯಲ್ಲಿ ನಿಧಿ ಇದೆ ಎಂದು ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಇದೀಗ ಸೆರೆಮನೆ ಸೇರಿದ ಆರೋಪಿಯಾಗಿದ್ದಾನೆ.

ಈತನ ಮನೆಯಲ್ಲಿ ಪ್ರತಿನಿತ್ಯ ನಾಗರಹಾವು ಕಾಣಿಸಿಕೊಳ್ಳುತ್ತಿದ್ದು ಈ ವಿಚಾರವನ್ನು ತನ್ನ ಸ್ನೇಹಿತನಾದ ಮೂರ್ನಾಡ್ ನ ಆತೀಕ್ ಎಂಬಾತನ ಬಳಿ ಹೇಳಿದ ಹಿನ್ನೆಲೆಯಲ್ಲಿ ಆತ ಕಾಸರಗೋಡು ನಿಂದ ಓರ್ವ ಉಸ್ತಾದ್ ನನ್ನು ಕರೆಸಿದ್ದಾನೆ. ಉಸ್ತಾದ್ ಪ್ರಾರ್ಥನೆ ಮಾಡಿದ ಸಂದರ್ಭದಲ್ಲಿ ಮನೆಯ ಮೂರನೇ ಕೋಣೆಯಲ್ಲಿ ನಿಧಿ ಇರುವುದಾಗಿ ಯಂತ್ರದ ಪರಿಶೋಧನೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾನೆ. ಆವಾಗ ಕೋಣೆಯಲ್ಲಿ ಗುಂಡಿ ತೋಡಲು ಶುರು ಮಾಡಿ, ಯಂತ್ರದಲ್ಲಿ ಪರಿಶೀಲನೆ ಮಾಡಿದಾಗ ನಿಧಿ ಇರುವ ಯಾವುದೇ ಶಬ್ದ ಬಾರದ ಹಿನ್ನೆಲೆಯಲ್ಲಿ ಅವರು ಅಲ್ಲಿಂದ ತೆರಳಿದ್ದಾರೆ.

ತದನಂತರ ಆಸೀಫ್ ಈ ವಿಚಾರವನ್ನು ಕುಶಾಲನಗರದ ಆರೀಫ್ ಮತ್ತು ಮಡಿಕೇರಿಯ ಫಾಹೀದ್ ಎಂಬುವವರ ಬಳಿ ಹೇಳಿದ ಹಿನ್ನೆಲೆ, ಮಾಟಮಂತ್ರ ಮಾಡಿಸಿದರೆ ನಿಧಿ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಮಾಟಮಂತ್ರ ಮಾಡಿಸಲೆಂದು ತಮಿಳುನಾಡಿನಿಂದ ಕರ್ಪಸ್ವಾಮಿ ಎಂಬ ಮಾಂತ್ರಿಕನನ್ನು ಹಾಗೂ ಆತನೊಂದಿಗೆ ಮೂವರನ್ನು ಕರೆಸಿದ್ದಾನೆ. ನಿರಂತರವಾಗಿ 35 ದಿನಗಳ ಕಾಲ ಪೂಜೆ ನೆರವೇರಿಸಿ ನಂತರ ಕೋಳಿ ಬಲಿ ನೀಡಿದರೆ ನಿಧಿ ಸಿಗಲಿದೆ ಎಂದು ಮಾಂತ್ರಿಕ ಹೇಳಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಪೂಜೆ ನೆರವೇರತೊಡಗಿದವು.

ಈ ಮನೆಯಲ್ಲಿ ಅಕ್ರಮವಾಗಿ ನಿಧಿ ಶೋಧ ಕಾರ್ಯ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಕೋಣೆಯಲ್ಲಿ ಗುಂಡಿ ತೋಡಿರುವುದು ಹಾಗೂ ಪೂಜೆ ನಡೆಸಿರುವುದು ಪತ್ತೆಯಾಗಿದೆ.

ಈ ವೇಳೆ ಪೊಲೀಸರು ಆಸೀಫ್ ನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ ನಿಧಿಯ ಆಸೆಗೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆ ಎಸಗಿದ ಪ್ರಕರಣದಲ್ಲಿ ಭಾಗಿಯಾದ 6 ಮಂದಿಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಮತ್ತು ವಾಮಾಚಾರ ಇವುಗಳ ಪ್ರತಿಬಂಧಕ ಮತ್ತು ನಿರ್ಮೂಲನೆ ಅಧಿನಿಯಮ 2017ರ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago