ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು ಆಹಾರ ಉತ್ಪನ್ನಗಳು ಜಿಲ್ಲೆಗೆ ಸರಬರಾಜು ಆಗುತ್ತಿದೆ. ಕಣ್ಣೂರು ಒಂದು ಜಿಲ್ಲೆಯಿಂದ ಅನೇಕ ಆಹಾರ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಅವುಗಳಲ್ಲಿ ಬಹುತೇಕ ಉತ್ಪನ್ನಗಳು ಕಳಪೆ ಗುಣಮಟ್ಟ ಮತ್ತು ಬಳಸಲು ಯೋಗ್ಯವಲ್ಲ ಎಂಬ ವರದಿ ಈಗಾಗಲೇ ಇಲಾಖೆ ತರಿಸಿಕೊಂಡಿದೆ.
ಕಣ್ಣೂರು ಜಿಲ್ಲೆಯ ಇರಿಟ್ಟಿ ತಲಚೇರಿ, ಪಯ್ಯನ್ನೂರು, ತಳಿಪರಂಬ ತಾಲೂಕುಗಳಿಂದ ನಕಲಿ ಸಂಸ್ಥೆಗಳ ಹೆಸರಿನಲ್ಲಿ ಆಹಾರ ಉತ್ಪನ್ನಗಳು ಕೊಡಗು ಹಾಗು ಹಾಸನ ಜಿಲ್ಲೆಗೆ ಎಗ್ಗಿಲ್ಲದೆ ಸರಬರಾಜು ಆಗುತ್ತಿದೆ.
ಇನ್ನು ಆಹಾರ ಸುರಕ್ಷತೆ ಹಾಗು ಗುಣಮಟ್ಟ ಪ್ರಾಧಿಕಾರದ ಪ್ರಯೋಗಾಲಯದಲ್ಲಿ ಇನ್ನು 6 ವರದಿಗಳು ಬರಲು ಬಾಕಿ ಇದ್ದು ಅವುಗಳ ವರದಿ ಬಂದ ಬಳಿಕ ಇಲಾಖೆಯ ಆಯುಕ್ತರ ಗಮನಕ್ಕೆ ತಂದು ಕೇರಳ ಉತ್ಪನ್ನಗಳನ್ನು ಕರ್ನಾಟಕದಲ್ಲಿ ನಿಷೇದ ಮಾಡುವ ಸಾಧ್ಯತೆ ಇದೆ.
ದಿನನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಸುವ ನಕಲಿ ಸಂಸ್ಥೆಗಳ ಜೊತೆಗೆ ನೋಂದಾಯಿತ ಸಂಸ್ಥೆಗಳಿಗೂ ತಲೆನೋವು ಶುರುವಾಗಲಿದೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…