ಕೊಡಗು

ಕೊಡಗು ಜಿಲ್ಲೆಗೆ ಅನ್ಯ ರಾಜ್ಯದಿಂದ ಸರಬರಾಜಾಗುತ್ತಿದೆ ನಕಲಿ ಆಹಾರ ಪದಾರ್ಥಗಳು?

ಕೊಡಗು: ನಾಳೆಗೆ ತಯಾರಾಗಬೇಕಿದ್ದ ಬೇಕರಿ ಉತ್ಪನ್ನಗಳು ಅಕ್ಟೋಬರ್.25ರಂದೇ ಮಾಕುಟ್ಟ ಗಡಿ ಚೆಕ್ ಪೋಸ್ಟ್ ಮೂಲಕ ಕೊಡಗು ಜಿಲ್ಲೆಗೆ ಸದ್ದಿಲ್ಲದೇ ಎಂಟ್ರಿ ಕೊಡುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕೊಡಗು ಜಿಲ್ಲೆಗೆ ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಹಾಗು ವಯನಾಡು ಜಿಲ್ಲೆಗಳಿಂದ ಹೆಚ್ಚು ಆಹಾರ ಉತ್ಪನ್ನಗಳು ಜಿಲ್ಲೆಗೆ ಸರಬರಾಜು ಆಗುತ್ತಿದೆ. ಕಣ್ಣೂರು ಒಂದು ಜಿಲ್ಲೆಯಿಂದ ಅನೇಕ ಆಹಾರ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಅವುಗಳಲ್ಲಿ ಬಹುತೇಕ ಉತ್ಪನ್ನಗಳು ಕಳಪೆ ಗುಣಮಟ್ಟ ಮತ್ತು ಬಳಸಲು ಯೋಗ್ಯವಲ್ಲ ಎಂಬ ವರದಿ ಈಗಾಗಲೇ ಇಲಾಖೆ ತರಿಸಿಕೊಂಡಿದೆ.

ಕಣ್ಣೂರು ಜಿಲ್ಲೆಯ ಇರಿಟ್ಟಿ ತಲಚೇರಿ, ಪಯ್ಯನ್ನೂರು, ತಳಿಪರಂಬ ತಾಲೂಕುಗಳಿಂದ ನಕಲಿ ಸಂಸ್ಥೆಗಳ ಹೆಸರಿನಲ್ಲಿ ಆಹಾರ ಉತ್ಪನ್ನಗಳು ಕೊಡಗು ಹಾಗು ಹಾಸನ ಜಿಲ್ಲೆಗೆ ಎಗ್ಗಿಲ್ಲದೆ ಸರಬರಾಜು ಆಗುತ್ತಿದೆ.

ಇನ್ನು ಆಹಾರ ಸುರಕ್ಷತೆ ಹಾಗು ಗುಣಮಟ್ಟ ಪ್ರಾಧಿಕಾರದ ಪ್ರಯೋಗಾಲಯದಲ್ಲಿ ಇನ್ನು 6 ವರದಿಗಳು ಬರಲು ಬಾಕಿ ಇದ್ದು ಅವುಗಳ ವರದಿ ಬಂದ ಬಳಿಕ ಇಲಾಖೆಯ ಆಯುಕ್ತರ ಗಮನಕ್ಕೆ ತಂದು ಕೇರಳ ಉತ್ಪನ್ನಗಳನ್ನು ಕರ್ನಾಟಕದಲ್ಲಿ ನಿಷೇದ ಮಾಡುವ ಸಾಧ್ಯತೆ ಇದೆ.

ದಿನನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಸುವ ನಕಲಿ ಸಂಸ್ಥೆಗಳ ಜೊತೆಗೆ ನೋಂದಾಯಿತ ಸಂಸ್ಥೆಗಳಿಗೂ ತಲೆನೋವು ಶುರುವಾಗಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

20 hours ago